Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿ ಜನತೆಗೆ ಸಿಹಿ ಸುದ್ದಿ: ಮಂಗಳೂರು -ಬೆಂಗಳೂರು ವಿಶೇಷ ರೈಲು ಸಂಚಾರ
    ಇತ್ತೀಚಿನ ಸುದ್ದಿ

    ಕರಾವಳಿ ಜನತೆಗೆ ಸಿಹಿ ಸುದ್ದಿ: ಮಂಗಳೂರು -ಬೆಂಗಳೂರು ವಿಶೇಷ ರೈಲು ಸಂಚಾರ

    July 24, 2022
    Share

    ಮಂಗಳೂರು: ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆ ಆರಂಭಿಸಲಾಗುವುದು. ಜುಲೈ 27 ರಿಂದ ಆಗಸ್ಟ್ 31 ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರಿನಿಂದ ಬೆಂಗಳೂರು ನಗರಕ್ಕೆ ರೈಲು ಸಂಚರಿಸಲಿದೆ.

    ಜುಲೈ 26 ರಿಂದ ಆಗಸ್ಟ್ 30ರವರೆಗೆ ಪ್ರತಿ ಭಾನುವಾರ, ಮಂಗಳವಾರ, ಗುರುವಾರ ಬೆಂಗಳೂರಿನಿಂದ ಮಂಗಳೂರಿಗೆ ರೈಲು ಸಂಚರಿಸಲಿದೆ.

    ಭಾರಿ ಮಳೆಯ ಕಾರಣ ಬೆಂಗಳೂರು -ಮಂಗಳೂರು ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಬೇಡಿಕೆ ಬಂದಿದೆ. ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ, ಮಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಸಿಟಿ ಜಂಕ್ಷನ್ ನಡುವೆ ಮೈಸೂರು ಮಾರ್ಗದಲ್ಲಿ ಜನವರಿ 26ರಿಂದ ಆಗಸ್ಟ್ 31ರವರೆಗೆ ವಾರದಲ್ಲಿ ಮೂರು ದಿನ ವಿಶೇಷ ರಾತ್ರಿ ರೈಲು ಸೇವೆಗೆ ರೈಲ್ವೆ ಮಂಡಳಿಯಿಂದ ಅನುಮೋದನೆ ನೀಡಲಾಗಿದೆ.

    ಭಾರಿ ಮಳೆ ಮತ್ತು ಭೂಕುಸಿತದ ಕಾರಣ ರಸ್ತೆ ಸಂಚಾರಕ್ಕೆ ತೊಂದರೆಯಾಗಿರುವುದರಿಂದ ಹೆಚ್ಚುವರಿ ರೈಲು ಒದಗಿಸಲು ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದು, ಸಂಸದರು ರೈಲ್ವೆ ಸಚಿವರನ್ನು ಭೇಟಿಯಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದರು.

    ರಾತ್ರಿ 8.30 ಕ್ಕೆ ಬೆಂಗಳೂರಿನಿಂದ ಹೊರಡಲಿರುವ ರೈಲು ಕೆಂಗೇರಿ, ರಾಮನಗರ, ಚನ್ನರಾಯಪಟ್ಟಣ, ಮಂಡ್ಯ, ಮೈಸೂರು ಜಂಕ್ಷನ್, ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಮಂಗಳೂರು ಜಂಕ್ಷನ್ ಹಾಗೂ ಮಂಗಳೂರು ಸೆಂಟ್ರಲ್ ತಲುಪಲಿದೆ. ಮಂಗಳೂರಿನಿಂದ ಸಂಜೆ 6:35ಕ್ಕೆ ಹೊರಡುವ ರೈಲು ಬೆಳಗ್ಗೆ 6.15ಕ್ಕೆ ಬೆಂಗಳೂರು ಸಿಟಿ ಜಂಕ್ಷನ್ ತಲುಪಲಿದೆ.

    Post Views: 240

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.