Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ ಪೊಲೀಸ್ ಕಾರ್ಯಾಚರಣೆ, LPG ಸಿಲಿಂಡರ್ ಕಳ್ಳರ ಬಂಧನ, 2.5 ಲಕ್ಷದ ಸಾಮಾಗ್ರಿ ವಶಕ್ಕೆ..!
    ಇತ್ತೀಚಿನ ಸುದ್ದಿ

    ವಿಟ್ಲ ಪೊಲೀಸ್ ಕಾರ್ಯಾಚರಣೆ, LPG ಸಿಲಿಂಡರ್ ಕಳ್ಳರ ಬಂಧನ, 2.5 ಲಕ್ಷದ ಸಾಮಾಗ್ರಿ ವಶಕ್ಕೆ..!

    October 31, 2024
    Share

    ವಿಟ್ಲ : ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬೊಳಿಯಾರು ಗ್ರಾಮದ ಮಹಮ್ಮದ್ ರಿಯಾಜ್ ಹಸನಬ್ಬ ಯಾನೆ ರಿಯಾಜ್ (38) ಮತ್ತು ಉಳ್ಳಾಲ ಕೋಟೆ ನಿವಾಸಿ ಮೊಹಮ್ಮದ್ ಇಂಮ್ತಿಯಾಜ್ ( 38) ಬಂಧಿತ ಆರೋಪಿಗಳು.

    ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ರೂ 1,35,000/–ರೂ ಮೌಲ್ಯದ ಗ್ಯಾಸ್‌ ಸಿಲಿಂಡರ್‌ ಹಾಗೂ ಮನೆ ಸಾಮಗ್ರಿಗಳು , ಹಾಗೂ ಕಳ್ಳತನಕ್ಕೆ ಉಪಯೋಗಿಸಿದ 1,50,000/- ರೂ ಮೌಲ್ಯದ KA-19-AD-0585 ನೊಂದಣಿ ನಂಬ್ರದ ಅಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.ಪೋಲೀಸರು ಸ್ವಾದೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ ಎಂದು ತಿಳಿಸಿದ್ದಾರೆ.

    ಆರೋಪಿತರು ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಲ್ಲಿ, ವಿಟ್ಲ ಪೋಲೀಸ್ ಠಾಣೆಯ ಮಿತ್ರರು, ಕೊಡಾಜೆ ಎರಡು ಮನೆ ಕಳವು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿನ ಶಾಲೆ ಹಾಗೂ ಅಂಗನವಾಡಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಇವರ ವಿರುದ್ದ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ಕೋಣಾಜೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    .ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌ ಐ.ಪಿ.ಎಸ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜೇಂದ್ರ ಡಿ ಎಸ್‌ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್.‌ ವಿಜಯ ಪ್ರಸಾದ್‌ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕ ನಾಗರಾಜ್‌ ಹೆಚ್‌ ಈ ರವರ ನೇತ್ರತ್ವದಲ್ಲಿ ಪೊಲೀಸ್‌ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್‌, ಕೌಶಿಕ್‌ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ ,ರಕ್ಷೀತ್‌ ರೈ,ಶ್ರೀಧರ ಸಿ ಎಸ್‌, ಕೃಷ್ಣ ನಾಯ್ಕ್‌, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್‌,ಸತೀಶ್‌ ,ಗಣಕಯಂತ್ರ ವಿಭಾಗದ ಸಂಪತ್‌, ದಿವಾಕರ್‌, ಭಾಗವಹಿಸಿರುತ್ತಾರೆ.

    Post Views: 206

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.