Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Leisure»Entertainment»ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣು!
    Entertainment

    ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣು!

    November 3, 2024
    Share

    ನಟ, ನಿರ್ದೇಶಕ ಗುರುಪ್ರಸಾದ್‌ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

    ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ.

    ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್​ಮೆಂಟ್ ಒಂದರಲ್ಲಿ ಗುರುಪ್ರಸಾದ್ ವಾಸವಿದ್ದರು, ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಪೊಲೀಸರು.

    Post Views: 364

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು- ಹೈಕೋರ್ಟ್ ಖಡಕ್ ಆದೇಶ

    August 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.