Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌‌…!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌‌…!

    November 5, 2024
    Share

    ಬೆಳ್ತಂಗಡಿ: ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್‌ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ.

    ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ.

    ಬಳಿಕ ವೀಡಿಯೊ ಕರೆಯಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿಯ ಮುಖವನ್ನು ಬಳಸಿ ಅಶ್ಲೀಲ ವೀಡಿಯೊಗೆ ಎಡಿಟ್ ಮಾಡಿ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೇರೊಬ್ಬ ವ್ಯಕ್ತಿ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯನ್ನು ಈತನ ಮುಂದಿರಿಸಿದ್ದಾನೆ.

    ಈ ವಿದ್ಯಮಾನದಿಂದ ಆತಂಕಕ್ಕೊಳಗಾದ ವಿದ್ಯಾರ್ಥಿಯು ಈ ವಿಚಾರವನ್ನು ಮಾಧ್ಯಮ ಪ್ರತಿನಿಧಿಯೋರ್ವರ ಗಮನಕ್ಕೆ ತಂದಿದ್ದು, ಅವರು ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಯ ಹಾಗೂ ಸೈಬರ್ ಕ್ರೈಮ್ ವಿಭಾಗಕ್ಕೆ ಮಾಹಿತಿಯನ್ನು ತಕ್ಷಣವೇ ರವಾನಿಸಲು ಸಲಹೆ ನೀಡಿದರು. ಈ ಮಧ್ಯೆ ಸಂಬಂಧಪಟ್ಟ ಖಾತೆಗಳನ್ನು ಬ್ಲಾಕ್ ಮಾಡುವ ಸಲಹೆಗಳನ್ನು ವಿದ್ಯಾರ್ಥಿಗೆ ಪೊಲೀಸ್ ಅಧಿಕಾರಿಗಳು ನೀಡಿದರು.

    ಪೊಲೀಸ್‌ ಇಲಾಖೆಯ ಗಮನಕ್ಕೆ ತಮ್ಮ ಕೃತ್ಯದ ಬಗ್ಗೆ ಮಾಹಿತಿ ಲಭಿಸಿದೆ ಎಂಬ ಸುಳಿವು ಸಿಕ್ಕಾಕ್ಷಣ ವಿದ್ಯಾರ್ಥಿಯನ್ನು ಬೆದರಿಸುವ ಕಾರ್ಯದಿಂದ ವಿಮುಖವಾದ ತಂಡ ಬಳಸಿದ ಮೂರು ಸಂಖ್ಯೆಯನ್ನು ನಿಷ್ಕ್ರಿಯಗೊಳಿಸಿದೆ. ಅಲ್ಲದೆ ಬೆದರಿಕೆಗೆ ತುತ್ತಾದ ವಿದ್ಯಾರ್ಥಿಯನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬ್ಲಾಕ್ ಮಾಡಿದೆ. ತಮಗೆ ತಿಳಿಯದಂತೆ ವೀಡಿಯೊ ಕರೆ ಸ್ವೀಕರಿಸಿದ ಮಾತ್ರಕ್ಕೆ ತಮ್ಮ ಅಶ್ಲೀಲ ವೀಡಿಯೊವೊಂದು ಸಿದ್ಧವಾಗಿ ಅದನ್ನು ತಮ್ಮ ಮಾನಹಾನಿಗೆ ಬಳಸುವ ಬೆದರಿಕೆಯೊಡ್ಡುವ, ಆ ಮೂಲಕ ಹಣಕ್ಕಾಗಿ ಪೀಡಿಸುವ ಜಾಲಗಳು ಸಕ್ರೀಯವಾಗಿದ್ದು, ಈ ಜಾಲಕ್ಕೆ ಸಿಲುಕಿದರೂ ಭಯಪಡದೆ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ಸಹಾಯ ಸಂಖ್ಯೆ 1930ಕ್ಕೆ ಸಂಪರ್ಕಿಸಿ ಸಹಾಯ ಯಾಚಿಸಬಹುದೆಂದು ಪೊಲೀಸರು ತಿಳಿಸಿದ್ದಾರೆ.

    Post Views: 287

    Related Posts

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.