Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»18 ವರ್ಷಗಳ ಹಿಂದೆ ಹತ್ಯೆಯಾದ ಪುತ್ರಿಯ ತಲೆಬುರುಡೆ ಸ್ವೀಕರಿಸಿದ ಪೋಷಕರು..!
    ಇತ್ತೀಚಿನ ಸುದ್ದಿ

    18 ವರ್ಷಗಳ ಹಿಂದೆ ಹತ್ಯೆಯಾದ ಪುತ್ರಿಯ ತಲೆಬುರುಡೆ ಸ್ವೀಕರಿಸಿದ ಪೋಷಕರು..!

    November 13, 2024
    Share

    ಕಾಸರಗೋಡು: ಬರೋಬ್ಬರಿ 18 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆ ಮಾಲೀಕನಿಂದ ಹತ್ಯೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ. ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ.‌ ಹಂಝ ಮನೆಯಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ ತನ್ನ 13ನೇ ವಯಸ್ಸಿನ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ ನಡುವೆ ಸುಟ್ಟ ಗಾಯಗಳಾಗಿತ್ತು. ಈ ವಿಚಾರ ಹೊರಗೆ ತಿಳಿಯುವುದು ಬೇಡವೆಂದು 2008ರ ಡಿಸೆಂಬರ್ ತಿಂಗಳಲ್ಲಿ ಹಂಝಾ ಹಾಗೂ ಆತನ ಪತ್ನಿ ಮೈಮುನಾ ಸಫಿಯಾಳನ್ನು ಕೊಲೆಗೈದು ಹಲವು ತುಂಡುಗಳನ್ನಾಗಿ ಮಾಡಿ ಹೂತು ಹಾಕಿದ್ದರೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿತ್ತು. 2008ರಲ್ಲಿ ಗೋವಾದ ಅಣೆಕಟ್ಟಿನ ಬಳಿ ಈ ಮೂಳೆಗಳು ಪತ್ತೆಯಾಗಿತ್ತು. ಪ್ರಕರಣದ ಒಂದನೇ ಆರೋಪಿ ಹಂಝಾಗೆ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಬಳಿಕ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು. ಚಾರ್ಜ್ ಶೀಟ್‌ನೊಂದಿಗೆ ತಲೆಬುರುಡೆ ಸೇರಿದಂತೆ ದೇಹದ ಭಾಗಗಳನ್ನು ಕ್ರೈಂ ಬ್ರಾಂಚ್ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ. ಆದರೆ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಪುತ್ರಿಯ ಅಂತ್ಯಸಂಸ್ಕಾರ ಮಾಡಬೇಕೆಂದು ಕೋರಿ ಪೋಷಕರು ಕಳೆದ ತಿಂಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಸಿ. ಶುಕೂರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಾನು ಎಸ್. ಪಣಿಕ್ಕರ್ ಅವರು ಮೃತ ಸಫಿಯಾಳ ದೇಹದ ಭಾಗಗಳನ್ನು ಪೋಷಕರಿಗೆ ಒಪ್ಪಿಸುವಂತೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ ಸಫಿಯಾ ಪೋಷಕರು ಪುತ್ರಿಯ ದೇಹಾವಶೇಷಗಳನ್ನು ಸ್ವೀಕರಿಸಿದರು. ಈ ಸಂದರ್ಭ ಸಫಿಯಾ ಹೆತ್ತವರು ಆಕ್ರಂದನ ಮುಗಿಲು ಮುಟ್ಟಿತ್ತು.

    Post Views: 182

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.