Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸಂಚಾರ
    ಇತ್ತೀಚಿನ ಸುದ್ದಿ

    BIG NEWS: ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸಂಚಾರ

    November 17, 2024
    Share

    ಶಬರಿಮಲೆ ಯಾತ್ರಿರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಪ್ರಾರಂಭಿಸಲಿದೆ.

    ನವೆಂಬರ್ 19 ರಿಂದ ಜನವರಿ 15ರವರೆಗೆ ಈ ರೈಲು ಸಂಚರಿಸಲಿದೆ ಇದರ ಜೊತೆಗೆ ವಾರಕ್ಕೊಮ್ಮೆ ಹೆಚ್ಚುವರಿ ರೈಲು ಸಹ ಸಂಚರಿಸಲಿದೆ.

    ಹುಬ್ಬಳ್ಳಿ ಹಾಗೂ ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
    ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.
    ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.
    2 ಎಸಿ ಟು ಟೈರ್ ​, 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

    ಇನ್ನು ಹೆಚ್ಚುವರಿಯಾಗಿ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ.

    ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ.
    ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ.

    ಎಸ್​ಎಸ್​ಎಸ್​ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್​ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್​, ತಿರುಪ್ಪೂರು, ಪೋದನೂರು, ಪಾಲಕ್ಕಾಡ್​, ತ್ರಿಶೂರ್​, ಅಲುವ, ಎರ್ನಾಕುಲಂ ಟೌನ್​, ಎಟ್ಟುಮನೂರ್​ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆಯಾಗಲಿದೆ.

    Post Views: 231

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.