Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

     ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

    November 19, 2024
    Share

    ತಿರುವನಂತಪುರಂ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಮಾಲಿವುಡ್ ಹಿರಿಯ ನಟ ಸಿದ್ದಿಕ್ ‌ಅವರಿಗೆ ಮಂಗಳವಾರ (ನ.19ರಂದು) ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

    ಈ ಹಿಂದೆ ನ್ಯಾ. ಬೇಲಾ ಎಂ.ತ್ರಿವೇದಿ ಮತ್ತು ಸತೀಶ್‌ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ, ವಿಚಾರಣೆಗೆ ಸಹಕರಿಸುವಂತೆ ಮತ್ತು ಬಂಧನದಿಂದ ರಕ್ಷಣೆ ನೀಡಿ ಸೆ.30ರಂದು ಮಧ್ಯಂತರ ಆದೇಶ ನೀಡಿತ್ತು.

    ಇತ್ತೀಚೆಗೆ ನಟನ ಪರ ಹಿರಿಯ ವಕೀಲ ಮುಕುಲ್‌ ರೋಹಟಗಿ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದು ಕೇಳಿದ್ದರು. ಈ ಕಾರಣದಿಂದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್‌ ಮತ್ತಷ್ಟು ವಿಸ್ತರಿಸಿತ್ತು.

    ಮಂಗಳವಾರ ಸುಪ್ರೀಂ ಕೋರ್ಟ್‌ ನಟ ಸಿದ್ದಿಕ್ ಅವರಿಗೆ ಕೆಲ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಹಿರಿಯ ನಟ ತನ್ನ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು. ತನಿಖಾಧಿಕಾರಿಗೆ ತನಿಖೆಗೆ ಸಹಕರಿಸಬೇಕೆಂದು ಸೂಚನೆ ನೀಡಿದೆ.

    ದೂರುದಾರೆ 13 ಜನರ ವಿರುದ್ಧ ಕಿರುಕುಳ ಆರೋಪವನ್ನು 2018ರಲ್ಲಿ ಫೇಸ್‌ ಬುಕ್‌ನಲ್ಲಿ ಮಾಡಿರುವುದು ನ್ಯಾಯಾಲಯ ಗಮನಿಸಿದೆ. 8 ವರ್ಷಗಳ ಕಾಲ ಪೊಲೀಸರನ್ನು ಯಾಕೆ ಸಂಪರ್ಕಿಸಿಲ್ಲ. ಹೇಮಾ ಸಮಿತಿಗೂ ಯಾಕೆ ತಿಳಿಸಿಲ್ಲ ಎಂದು ಕೋರ್ಟ್‌ ಪ್ರಶ್ನಿಸಿದೆ.

    ಪ್ರಕರಣವೇನು?:

    2016ರ ಜನವರಿ 28ರಂದು ತಿರುವನಂತಪುರಂನ ಹೊಟೇಲ್‌ನಲ್ಲಿ ಸಿನಿಮಾವೊಂದರ ಪ್ರಿವ್ಯೂ ಶೋ ಬಳಿಕ ಸಿದ್ದೀಕ್‌ ತನ್ನ ಮೇಲೆ ಅತ್ಯಾ*ಚಾರವೆಸಗಿದ್ದರು ಎಂದು ನಟಿಯೊಬ್ಬರು ಆರೋಪಿಸಿದ್ದರು. ಪೊಲೀಸರು ನಟನ ವಿರುದ್ಧ ಎಫ್‌ ಐಆರ್‌ ದಾಖಲಿಸಿದ್ದರು.

    ಈ ಆರೋಪದ ಬಳಿಕ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (Malayalam Movie Artistes) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

    ಈ ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿದ್ದ ಸಿದ್ದೀಕ್‌ ಹೈಕೋರ್ಟ್‌ಗೆ ಸೆ.24 ರಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.

    Post Views: 341

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.