Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರವೀಣ್ ಹತ್ಯೆಗೆ ಹಲವು ಕಾರಣ, ತಂಡಗಳ ರಚನೆ, 15 ಕ್ಕೂ ಹೆಚ್ಚು ಮಂದಿ ವಶಕ್ಕೆ: ಎಡಿಜಿಪಿ ಅಲೋಕ್ ಕುಮಾರ್
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರವೀಣ್ ಹತ್ಯೆಗೆ ಹಲವು ಕಾರಣ, ತಂಡಗಳ ರಚನೆ, 15 ಕ್ಕೂ ಹೆಚ್ಚು ಮಂದಿ ವಶಕ್ಕೆ: ಎಡಿಜಿಪಿ ಅಲೋಕ್ ಕುಮಾರ್

    July 28, 2022
    Share

    ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಗೆ ಮೇಲ್ನೋಟಕ್ಕೆ 2-3 ಕಾರಣಗಳು ಕಂಡು ಬರುತ್ತಿದೆ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಶಕ್ಕೆ ಪಡೆದವರಲ್ಲಿ ಅವರು ಯಾರು ಎಂಬುದನ್ನು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ ಎಂದು ಸುಳ್ಯದ ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.

    ಘಟನೆಯ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ನಿನ್ನೆಯಿಂದ ಮಾಹಿತಿ ಪಡೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ. ಮಂಗಳೂರು ಕಮಿಷನರ್ ಸಹಾಯ ಕೂಡ ಪಡೆಯಲಾಗಿದೆ.‌ ಉಡುಪಿ ಪೊಲೀಸರ ಸಹಾಯ ಕೂಡ ಪಡೆಯಲಾಗಿದೆ. ದಕ್ಷ ಅಧಿಕಾರಿಗಳ 6 ತಂಡ ನಾವು ರಚನೆ ಮಾಡಿದ್ದು ಈಗಾಗಲೇ 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದಿದ್ದಾರೆ. ಇನ್ನು ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು.

    ಡಿ.ಸಿ ಸೆಕ್ಷನ್ 144 ಜಾರಿ ಮಾಡಿದ್ದಾರೆ ಪರಿಸ್ಥಿತಿ ಹತೋಟಿಯಲ್ಲಿದೆ. ಜನ ಯಾರು ಗುಂಪು ಕಟ್ಟಿ ಓಡಾಡಬಾರದು ಮತ್ತು ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಅವಕಾಶ ಕೊಡಬೇಕು ಎಂದು ಅಲೋಕ್ ಮೋಹನ್ ಹೇಳಿದ್ದಾರೆ. ಹತ್ಯೆಗೆ 2-3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಶಕ್ಕೆ ಪಡೆದವರಲ್ಲಿ ಅವರು ಎಂಬುದು ಸದ್ಯ ಹೇಳಲು ಸಾಧ್ಯವಿಲ್ಲ.

    ವಿಚಾರಣೆ ಹಂತದಲ್ಲಿ ನಾನು ಇಷ್ಟು ಮಾತ್ರ ಹೇಳಬಲ್ಲೆ ಎಂದು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

    Post Views: 175

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.