Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು DYSP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಅಂತ್ಯ..!
    ಇತ್ತೀಚಿನ ಸುದ್ದಿ

    ಇಂದು DYSP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಅಂತ್ಯ..!

    December 2, 2024
    Share

    ಹಾಸನ: ಇಂದು ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಇಂತಹ ಹೊತ್ತಿನಲ್ಲೇ ಅಧಿಕಾರಿ ಬಾಳಲ್ಲಿ ವಿಧಿಯಾಟವಾಡಿದೆ. ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಹರ್ಷವರ್ಧನ್, ಹಾಸನ ಬಳಿ ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.‌

    ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೈಸೂರಿನ ಪೊಲೀಸ್ ಅಕಾಡಮೆಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದೆ. ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ಧನ್ ದುರಂತ ಅಂತ್ಯ ಕಂಡಿದ್ದಾರೆ. ಪೊಲೀಸ್ ವಾಹನದ ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಅಪಘಾತವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

    ಮೈಸೂರಿನ ಐಜಿಪಿ ಕಚೇರಿಗೆ ತೆರಳಿ ಅಧಿಕಾರಿ ಭೇಟಿಯಾಗಿದ್ದ ಹರ್ಷಬರ್ಧನ್ ಮಹತ್ವದ ಮಾತುಕತೆ ನಡೆಸಿದ್ದರು. ಈ ವೇಳೆ ಹರ್ಷಬರ್ಧನ್‌ಗೆ ಶುಭಕೋರಿ ಕಳುಹಿಸಲಾಗಿತ್ತು. ಮಧ್ಯ ಪ್ರದೇಶ ಮೂಲದ ಹರ್ಷಬರ್ಧನ್ ಅಧಿಕಾರ ಸ್ವೀಕಾರಕ್ಕಾಗಿ ಮೈಸೂರಿನಿಂದ ಮಾರ್ಗದ ಮೂಲಕ ಹಾಸನಕ್ಕೆ ಆಗಮಿಸಿದ್ದಾರೆ. ಹರ್ಷಬರ್ಧನ್ ಸಾವಿನ ಸುದ್ದಿಯನ್ನು ಆಸ್ಪತ್ರೆ ಮುಖ್ಯಸ್ಥ ಡಾ. ಬಷೀರ್ ಸ್ಪಷ್ಟಪಡಿಸಿದ್ದಾರೆ.

    ಮಾಹಿತಿ ಸಿಗುತ್ತಿದ್ದಂತೆ ಹಾಸನ ಎಸ್‌ಪಿ ಮೊಹಮದ್ ಸುಜಿತಾ, ಎಎಸ್‌ಪಿಗಳಾದ ತಮ್ಮಯ್ಯ, ವೆಂಕಟೇಶ ನಾಯ್ದು ಸ್ಥಳಕ್ಕೆ ಧಾವಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷಬರ್ಧನ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸ್ ಅಧಿಕಾರಿಗಳ ದಂಡ ಆಸ್ಪತ್ರೆಯಲ್ಲಿ ಠಿಕಾಣಿ ಹೂಡಿತ್ತು. ವೈದ್ಯರ ತಂಡದ ಸಮಾಲೋಚನೆ ನಡೆಸಿತ್ತು.

    ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರ ಕುರಿತು ಪೊಲೀಸರು ಚರ್ಚಿಸಿದ್ದರು. ಆದರೆ ಹರ್ಷಬರ್ಧನ್ ಆರೋಗ್ಯ ಕ್ಷಣಕ್ಷಣಕ್ಕೂ ಚಿಂತಾಜನಕ ಸ್ಥಿತಿಗೆ ತಿರುಗಿತ್ತು. ಹರ್ಷಬರ್ಧನ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಲಿಲ್ಲ. ಬದಲಾಗಿ ಕ್ಷಣಕ್ಷಣಕ್ಕೂ ಆರೋಗ್ಯ ಹದಗೆಟ್ಟಿತ್ತು ಎಂದು ಹೇಳಲಾಗುತ್ತಿದೆ.

    Post Views: 282

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.