Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ…!!
    ಇತ್ತೀಚಿನ ಸುದ್ದಿ

    ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ…!!

    December 6, 2024
    Share

    ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ.

    ಆತನ ಅಣ್ಣನೂ ತನ್ನ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಯುವತಿಯೊಬ್ಬಳು ಕದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಜು. 21ರಂದು ದೂರುದಾರ ಯುವತಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕದ್ರಿಯಲ್ಲಿ ಕೆಟ್ಟು ಹೋಗಿದೆ.

    ಈ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್‌ ಸವಾರ ಮೊಹಮ್ಮದ್‌ ಶಫಿನ್‌ ಕಾರನ್ನು ಸರಿಪಡಿಸಿ, ಬಳಿಕ ಆಕೆಯನ್ನು ಅದೇ ಕಾರಿನಲ್ಲಿ ಕೊಡಿಯಾಲಬೈಲಿನ ಅಪಾರ್ಟ್‌ಮೆಂಟ್‌ ಒಂದರಲ್ಲಿರುವ ಆಕೆಯ ಮನೆಗೆ ಬಿಟ್ಟು ಬಂದಿದ್ದ. ಈ ವೇಳೆ ಆತ ಆಕೆಯ ಮೊಬೈಲ್‌ ನಂಬರ್‌ ಪಡೆದಿದ್ದ.ಆ. 8ರಂದು ಯುವತಿಯ ಮನೆಯ ಫ್ರಿಡ್ಜ್ ಕೆಟ್ಟು ಹೋಗಿದ್ದು, ಮನೆಯಲ್ಲಿ ಒಬ್ಬಳೇ ವಾಸವಿರುವುದರಿಂದ ಯುವತಿ ಸಹಾಯಕ್ಕಾಗಿ ಶಫಿನ್‌ಗೆ ಕರೆ ಮಾಡಿದ್ದಾಳೆ. ಆತ ತನ್ನ ಪರಿಚಿತ ರಿಪೇರಿಯವನನ್ನು ಯುವತಿಯ ಮನೆಗೆ ಕರೆದುಕೊಂಡು ಬಂದು ರಿಪೇರಿ ಮಾಡಿಸಿದ್ದ. ಬಳಿಕ ಎಲೆಕ್ಟ್ರಿಶಿಯನ್‌ನನ್ನು ಬಿಟ್ಟು ಬರುತ್ತೇನೆ ಎಂದು ಹೇಳಿ ಅಲ್ಲಿಯವರೆಗೆ ಫ್ರಿಡ್ಜ್ ಆನ್‌ ಮಾಡಬೇಡಿ ಎಂದು ಸೂಚಿಸಿದ್ದ. ಕೆಲವು ಹೊತ್ತಿನ ಬಳಿಕ ಶಫಿನ್‌ ವಾಪಸು ಬಂದಿದ್ದು, ಈ ವೇಳೆ ಹಣ್ಣು ಹಾಗೂ ಜ್ಯೂಸ್‌ ತಂದಿದ್ದ. ಜ್ಯೂಸ್‌ ಕುಡಿದ ಯುವತಿ ನಿದ್ದೆಗೆ ಜಾರಿದ್ದು, ಎಚ್ಚರಗೊಂಡಾಗ ಅನುಮಾನಗೊಂಡು ವಿಚಾರಿಸಿದಾಗ ಆತ ದೈಹಿಕ ಸಂಪರ್ಕ ನಡೆಸಿರುವುದಾಗಿ ತಿಳಿಸಿದ್ದ.

    ಜತೆಗೆ ಮುಂದೆಯೂ ಸಹಕರಿಸಬೇಕು. ಇಲ್ಲದಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಮಾಡಿರುವ ವೀಡಿಯೋವನ್ನು ಹಾಕುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ವೆುàಲ್‌ ಮಾಡಿದ್ದಾನೆ. ಜತೆಗೆ ಯುವತಿಯ ಕಾರನ್ನು ತನ್ನಲ್ಲಿ ಇಟ್ಟುಕೊಂಡಿದ್ದ.ಮನೆಗೆ ಅಕ್ರಮ ಪ್ರವೇಶ, ನಗದು ಕಳವುಈ ನಡುವೆ ಯುವತಿಯ ಮನೆಯವರು ಕಾರನ್ನು ಕೇಳಿದ್ದಾರೆ. ಆತನಿಂದ ಕಾರನ್ನು ಪಡೆದುಕೊಳ್ಳಬೇಕು ಎಂದು ಅ. 25ರಂದು ಆತನ ವಿಳಾಸವನ್ನು ಹುಡುಕಿಕೊಂಡು ದೇರಳಕಟ್ಟೆಯ ಆತ ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ಹೋದಾಗ ಕಾರು ಪಾರ್ಕಿಂಗ್‌ ಸ್ಥಳದಲ್ಲಿ ಕಂಡುಬಂದಿದೆ. ವಾಚ್‌ಮನ್‌ ಬಳಿ ಮನೆಯ ವಿಳಾಸ ಪಡೆದು ಹೋಗಿ ಆತನ ತಾಯಿಯಲ್ಲಿ ಕಾರು ವಾಪಸು ನೀಡುವಂತೆ ವಿನಂತಿಸಿದಾಗ ಅಲ್ಲಿದ್ದ ಶಫಿನ್‌ನ ಅಣ್ಣ ಮೊಹಮ್ಮದ್‌ ಶಿಯಾಬ್‌, ಅತ್ಯಾಚಾರ ಮಾಡಲು ಯತ್ನಿಸಿದ್ದ. ಜತೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಆತನಿಂದ ತಪ್ಪಿಸಿಕೊಂಡು ಯುವತಿ ಮನೆಗೆ ಬಂದಿದ್ದಾಳೆ. ಅ. 27ರಂದು ರಾತ್ರಿ 9 ಗಂಟೆ ವೇಳೆ ಮೊಹಮ್ಮದ್‌ ಶಫೀನ್‌ ಅಕ್ರಮವಾಗಿ ಯುವತಿಯ ಮನೆಗೆ ಪ್ರವೇಶಿಸಿ, ಆಕೆಯ ಬ್ಯಾಗ್‌ನಲ್ಲಿದ್ದ 62 ಸಾವಿರ ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

    Post Views: 244

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.