Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: MCC ಬ್ಯಾಂಕ್ ಅಧ್ಯಕ್ಷನ ಹೆಸರು ಹೇಳಿ, ವೀಡಿಯೋ ಮಾಡಿ ನೇಣಿಗೆ ಶರಣಾದ ವ್ಯಕ್ತಿ
    ಇತ್ತೀಚಿನ ಸುದ್ದಿ

    ಮಂಗಳೂರು: MCC ಬ್ಯಾಂಕ್ ಅಧ್ಯಕ್ಷನ ಹೆಸರು ಹೇಳಿ, ವೀಡಿಯೋ ಮಾಡಿ ನೇಣಿಗೆ ಶರಣಾದ ವ್ಯಕ್ತಿ

    December 18, 2024
    Share

    ಮಂಗಳೂರು: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರ ಹೆಸರು ಹೇಳಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮನೋಹರ್ ಪಿರೇರಾ ಅವರು ಉಳಾಯಿಬೆಟ್ಟುವಿನ ಕುಟಿನೋ ಪದವಿನಲ್ಲಿರುವ ತಮ್ಮ ಮನೆಯ ಮೇಲೆ ಎಂಸಿಸಿ ಬ್ಯಾಂಕ್‌ನಲ್ಲಿ 10ವರ್ಷಗಳ ಹಿಂದೆ ಸಾಲ ಪಡೆದಿದ್ದರು. ಈ ಸಾಲದ ಕಂತನ್ನು ಅವರ ದೊಡ್ಡಣ್ಣ ಮೆಲ್ಬಮ್‌ರವರು ತೀರಿಸುತ್ತಿದ್ದರು. ಕೊರೊನಾ ಸಂದರ್ಭ ಮೆಲ್ಬಮ್‌ರವರಿಗೆ ವ್ಯವಹಾರದಲ್ಲಿ ನಷ್ಟ ಉಂಟಾಗಿ ಲೋನ್ ಕಂತು ಬ್ಯಾಂಕಿಗೆ ಕಟ್ಟಲು ಸಾಧ್ಯವಾಗಿರಲಿಲ್ಲ. ಆದ್ದರಿಂದ 2ವರ್ಷಗಳ ಹಿಂದೆ ಬ್ಯಾಂಕ್‌ನವರು ಮನೆಯನ್ನು ಸೀಜ್ ಮಾಡಿದ್ದರು. ಇದರಿಂದ ಮನೋಹರ್ ಪಿರೇರಾರಿಗೆ ಮಾನಸಿಕ ಖಿನ್ನತೆ ಉಂಟಾಗಿ 2 ಸಲ ಹೃದಯಾಘಾತವಾಗಿತ್ತು. ಬಳಿಕ ಅವರ ಅತ್ತೆ 2023ರ ಫೆಬ್ರವರಿಯಲ್ಲಿ ಮನೋಹರ್‌ರವರ ಬ್ಯಾಂಕ್ ಖಾತೆಗೆ 15 ಲಕ್ಷ ಕಳಿಸಿದ್ದಾರೆ. ಈ ಹಣದಲ್ಲಿ ಬ್ಯಾಂಕ್ ಸಾಲ ತೀರಿಸುವ ಬಗ್ಗೆ ಮನೋಹರ್ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋರೊಂದಿಗೆ ಮಾತನಾಡಿ ಸೆಲ್ಸ್ ಚೆಕ್ ನೀಡಿದ್ದರು. ಬಳಿಕ ಬ್ಯಾಂಕಿನವರು ಸೀಜ್ ಮಾಡಿದ ಮನೆಯನ್ನು 6 ತಿಂಗಳ ಹಿಂದೆ ವಾಪಸ್ ವಾಸಕ್ಕೆ ಬಿಟ್ಟು ಕೊಟ್ಟಿದ್ದರು. ಲೋನ್ ಕಂತು ಇನ್ನೂ ಕೂಡ ಬಾಕಿ ಇರುವುದರಿಂದ ಮನೋಹರ್‌ರವರು ಮಾನಸಿಕವಾಗಿ ನೊಂದು ಡಿಸೆಂಬರ್ 17ರಂದು ಸಂಜೆ 3.45 ರಿಂದ 5ಗಂಟೆಯ ಒಳಗೆ ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ಮೊಬೈಲ್ ವೀಡಿಯೊ ಮಾಡಿ ತುಳು ಭಾಷೆಯಲ್ಲಿ ‘MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸೀಜ್ ಮಾಡಿರುವ ಮನೆಗೆ ತಾನು 15 ಲಕ್ಷ ಕೊಟ್ಟಿದ್ದೇನೆ. ಆದರೆ ಆತ 9 ಲಕ್ಷ ತಿಂದಿದ್ದಾನೆ’ ಎಂದು ಹೇಳಿದ್ದಾರೆ. ತನ್ನ ಅತ್ತೆ ಕಳುಹಿಸಿದ್ದ 15 ಲಕ್ಷ ಹಣದಲ್ಲಿ 9 ಲಕ್ಷ ರೂ. ಹಣವನ್ನು ಬ್ಯಾಂಕ್ ಅಧ್ಯಕ್ಷ ಸೆಲ್ಫ್ ಚೆಕ್ ಮೂಲಕ ತೆಗೆದುಕೊಂಡಿದ್ದರಿಂದ ಮನೆಯ ಮೇಲಿನ ಸಾಲ ಇನ್ನೂ ತೀರಿಲ್ಲ ಎಂಬ ಹತಾಶೆಯಿಂದ ಮನೋಹರ್ ಪಿರೇರಾ ಅವರ ಅನಾರೋಗ್ಯ ಉಲ್ಬಣಿಸಿ ಮಾನಸಿಕ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ MCC ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಪ್ರಕರಣ ದಾಖಲಾಗಿದೆ.

    Post Views: 276

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.