Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಜಿಟಲ್ ಅರೆಸ್ಟ್ ಮಾಡಿಸುವುದಾಗಿ ಮಂಗಳೂರಿನ ವ್ಯಕ್ತಿಗೆ 1.71ಕೋಟಿ ರೂ. ವಂಚನೆ..!!
    ಇತ್ತೀಚಿನ ಸುದ್ದಿ

    ಡಿಜಿಟಲ್ ಅರೆಸ್ಟ್ ಮಾಡಿಸುವುದಾಗಿ ಮಂಗಳೂರಿನ ವ್ಯಕ್ತಿಗೆ 1.71ಕೋಟಿ ರೂ. ವಂಚನೆ..!!

    December 25, 2024
    Share

    ಮಂಗಳೂರು: ಡಿಜಿಟಲ್ ಅರೆಸ್ಟ್ ಮಾಡಿಸುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬರನ್ನು ನಂಬಿಸಿ 1.71ಕೋಟಿ ರೂ. ವಂಚನೆ ಮಾಡಿರುವ ಕೇರಳ ಮೂಲದ ಯುವಕನನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳುಹಿಸಿದ್ದಾರೆ.

    ಕೇರಳ ರಾಜ್ಯದ ಕೋಝಿಕೋಡ್ ಜಿಲ್ಲೆಯ ಮಾವೂರ್, ಪಳ್ಳಿಯೊಲ್, ಚಿರಕ್ಕಲ್ ತಝಾಮ್, ಚೊಕ್ಕತ್‌ನ ಆಕಾಶ್ ಎ.(22) ಬಂಧಿತ ಆರೋಪಿ. ಪಿರ್ಯಾದಿದಾರರಿಗೆ ಅಪರಿಚಿತ ವ್ಯಕ್ತಿ TRAIನಿಂದ ಕರೆ ಮಾಡುವುದಾಗಿ ತಿಳಿಸಿ ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬ್ರ ರಿಜಿಸ್ಟರ್ ಆಗಿದೆ. ಮಾರ್ಕೆಟಿಂಗ್ ನೆಪದಲ್ಲಿ ತಮಗೆ ಸಂಬಂಧಿಸಿದ ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿ ಕಿರುಕುಳ ಕೊಡುತ್ತಿರುವುದರ ಬಗ್ಗೆ FIR ದಾಖಲಾಗಿದೆ. ಆದ್ದರಿಂದ ತಕ್ಷಣ ಎಫ್ಐಆರ್‌ ದಾಖಲಾದ ಅಂಧೇರಿ(E) ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ಮೊಬೈಲ್ ಸಂಖ್ಯೆ (9967014480)ಯ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುತ್ತದೆ.

    ಅಲ್ಲದೆ ಅಂಧೇರಿಯ ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಇದಕ್ಕೆ Identity ಬಳಸಿ ಸಿಮ್ ಖರೀದಿಸಲಾಗಿದೆ. ಆದ್ದರಿಂದ ತಮ್ಮನ್ನು ಬಂಧಿಸಿ ಜೈಲಿಗಟ್ಟಲಾಗುತ್ತದೆ‌. ಡಿಜಿಟಲ್ ಆರೆಸ್ಟ್ ಮಾಡುವುದಾಗಿ ಅವರನ್ನು ನಂಬಿಸಲಾಗಿದೆ. ಇದರಿಂದ ಬೆದರಿದ ಪಿರ್ಯಾದಿದಾರರು ಅಪರಿಚಿತ ಹೇಳಿದಂತೆ ಹಂತ ಹಂತವಾಗಿ 1,71,00,000ರೂ. ಆತ ಹೇಳಿದ ಬ್ಯಾಂಕ್‌ ಖಾತೆಗೆ ಹಾಕಿದ್ದಾರೆ. ಬಳಿಕ ತಾನು ವಂಚನೆಗೆ ಒಳಗಾಗಿರುವುದು ತಿಳಿದು ಮಂಗಳೂರು ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ಕೇರಳ ಮೂಲದ ಆಕಾಶ್‌ನನ್ನು ಬಂಧಿಸಿದ್ದಾರೆ. ಅಲ್ಲದೆ ಆತ ಸೈಬರ್ ಅಪರಾಧಕ್ಕೆ ಬಳಸಿರುವ ಬ್ಯಾಂಕ್ ಖಾತೆಯನ್ನು ಸೀಝ್ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಇನ್ನುಳಿದ ಆರೋಪಿತರ ಪತ್ತೆಗೆ ತನಿಖೆ ಮುಂದುವರೆದಿರುತ್ತದೆ

    Post Views: 185

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.