Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ!
    ಇತ್ತೀಚಿನ ಸುದ್ದಿ

    ಮಂಗಳೂರು: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ!

    December 27, 2024
    Share

    ಮಂಗಳೂರು: ಹೊಸ ವರ್ಷದ ನೆಪದಲ್ಲಿ ಯುವ ಜನತೆಯನ್ನು ಗುರಿಯಾಗಿಸಿ ನಡೆಸುವ ಎಲ್ಲ ಕಾರ್ಯಕ್ರಮಗಳನ್ನು ಪೊಲೀಸ್‌ ಇಲಾಖೆ ನಿರ್ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಪೊಲೀಸ್‌ ಇಲಾಖೆಗೆ ಮನವಿ ಮಾಡಿವೆ.

    ಹಲವಾರು ವರ್ಷದಿಂದ ಡ್ರಗ್ಸ್‌ ಮಾಫಿಯಾ ಕರಾವಳಿ ಭಾಗದಲ್ಲಿ ವ್ಯಾಪಕವಾಗಿದ್ದು, ಪಾರ್ಟಿಗಳಿಗೆ ಪೂರೈಕೆಯಾಗುತ್ತಿದೆ. ಸಾಕಷ್ಟು ಯುವಕ ಯುವತಿಯರ ಜೀವನ ಹಾಳಾಗಿದೆ. ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮತ್ತು ಸರಕಾರದ ಗಮನಕ್ಕೆ ಸಾಕಷ್ಟು ಬಾರಿ ಇದನ್ನು ತರಲಾಗಿದೆ. ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತಿದ್ದು, ಇದರ ಹಿಂದೆ ದೊಡ್ಡ ಜಾಲವೇ ಇದೆ. ಕೇರಳ-ಗೋವಾ ಸಹಿತ ವಿವಿಧ ರಾಜ್ಯಗಳಿಂದ ಮಾದಕ ಪದಾರ್ಥ ಬರುತ್ತಿರುವುದು ಆತಂಕಕಾರಿ ವಿಚಾರ.

    ಈ ಸಂದರ್ಭ ನಡೆಯುವ ಪಾರ್ಟಿಗಳಲ್ಲಿ ಡ್ರಗ್ಸ್‌ ಮಾತ್ರವಲ್ಲದೆ ಕೇರಳದಿಂದ ಯುವಕರು ಬಂದು ಯುವತಿಯರ ಬಾಳು ಹಾಳು ಮಾಡುವ ಕೆಲಸವನ್ನೂ ಮಾಡುತ್ತಾರೆ. ಕಾನೂನಿಗೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷದ ಪಾರ್ಟಿಗೆ ಪೊಲೀಸ್‌ ಆಯುಕ್ತರು ಅವಕಾಶ ಕೊಡಬಾರದು ಎಂದು ವಿಹಿಂಪ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಆಗ್ರಹಿಸಿದ್ದಾರೆ.
    ಪಾರ್ಟಿಗಳ ಮೇಲೆ ನಿಷೇಧ ಹೇರುವಂತೆ ಎಲ್ಲ ಪೊಲೀಸ್‌ ಠಾಣೆಗಳಿಗೂ ಮನವಿ ನೀಡಲಾಗುವುದು. ಪೊಲೀಸರು ಕ್ರಮ ಕೈಗೊಳ್ಳದಿದ್ದಲ್ಲಿ ಬಜರಂಗದಳದ ಕಾರ್ಯಕರ್ತರೇ ಆ ಕೆಲಸವನ್ನು ಮಾಡಲಿದ್ದಾರೆ. ಡ್ರಗ್ಸ್‌ ಮುಕ್ತ ಮಂಗಳೂರು ಕೇವಲ ಮಾತಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ತರಬೇಕು ಎಂದು ಬಜರಂಗದಳ ವಿಭಾಗ ಸಂಯೋಜಕ್‌ ಪುನೀತ್‌ ಅತ್ತಾವರ ಒತ್ತಾಯಿಸಿದ್ದಾರೆ.

    Post Views: 162

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.