Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಬ್ಬರು ಮಕ್ಕಳನ್ನು ಹತ್ಯೆಗೈದು ದಂಪತಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಇಬ್ಬರು ಮಕ್ಕಳನ್ನು ಹತ್ಯೆಗೈದು ದಂಪತಿ ಆತ್ಮಹತ್ಯೆ..!

    January 6, 2025
    Share

    ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ.

    ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ. ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

    ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

    ಅನೂಪ್ ಮನೆಯಲ್ಲಿ ಮೂರು ಜನ ಕೆಲಸ ಮಾಡುತ್ತಿದ್ದರು. ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು.

    ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನು ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರು. ಹೀಗಾಗಿ ಇಂದು ಬೆಳಗ್ಗೆ ಕೆಲಸವರು ಮನೆಗೆ ಬಂದಿದ್ದಾರೆ. ಭಾನುವಾರ ಸಹ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರು. ಮೂವರು ಕೆಲಸಗಾರರ ಪೈಕಿ ಇಬ್ಬರು ಅಡುಗೆಗೆ ನಿಯೋಜನೆಗೊಂಡಿದ್ದರೆ ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಮೂವರಿಗೂ ತಿಂಗಳಿಗೆ 15 ಸಾವಿರ ರೂ. ಸಂಬಳ ನೀಡುತ್ತಿದ್ದರು. ಟೆಕ್ಕಿ ಕುಟುಂಬ ಆರ್ಥಿಕವಾಗಿ ಸದೃಢವಾಗಿತ್ತು.

    ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿದ್ದಾರೆ.

    ಘಟನೆ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವಿಧಿ ವಿಜ್ಞಾನ ಪ್ರಾಯೋಗಾಲಯದ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಯಾಕೆ ಆತ್ಮಹತ್ಯೆಗೆ ಶರಣಾದರು ಎನ್ನುವುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದರು.

    Post Views: 263

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.