Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದ ಶರೋನ್ ರಾಜ್ ಕೊಲೆ ಪ್ರಕರಣ- ಪ್ರೇಯಸಿ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ..!
    ಇತ್ತೀಚಿನ ಸುದ್ದಿ

    ಕೇರಳದ ಶರೋನ್ ರಾಜ್ ಕೊಲೆ ಪ್ರಕರಣ- ಪ್ರೇಯಸಿ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ..!

    January 21, 2025
    Share

    ತಿರುವನಂತಪುರಂ: ಕೇರಳದ 23 ವರ್ಷದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಆತನ ಪ್ರೇಯಸಿ 24 ವರ್ಷದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

    ತನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ ಹೇಳಿಕೆಯನ್ನು ಕೋರ್ಟ್ ತಿರಸ್ಕರಿಸಿತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಈ ಪ್ರಕರಣದ ಮೂರನೇ ಆರೋಪಿಯಾಗಿರುವ ಆಕೆಯ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್‌ಗೆ 3 ವರ್ಷಗಳ ಜೈಲು ಶಿಕ್ಷೆಯನ್ನು ಕೂಡ ವಿಧಿಸಿ ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ.

    ಇನ್ನು 24 ವರ್ಷದ ಅಪರಾಧಿ ಗ್ರೀಷ್ಮಾ ಮರಣದಂಡನೆ ಶಿಕ್ಷೆ ಅನುಭವಿಸಿದ ಭಾರತದ ಅತ್ಯಂತ ಕಿರಿಯ ಯುವತಿಯಾಗಿದ್ದಾಳೆ. ತನ್ನ ಶೈಕ್ಷಣಿಕ ಸಾಧನೆಗಳು, ಹಿಂದೆ ಯಾವುದೇ ಅಪರಾಧ ಮಾಡಿಲ್ಲ ಮತ್ತು ತಾನು ತನ್ನ ಹೆತ್ತವರ ಏಕೈಕ ಮಗಳು ಎಂಬ ಅಂಶವನ್ನು ಉಲ್ಲೇಖಿಸಿ ಆಕೆ ಶಿಕ್ಷೆಯಲ್ಲಿ ಸಡಿಲಿಕೆಗೊಳಿಸುವಂತೆ ಕೋರ್ಟ್ ಮೊರೆ ಹೋಗಿದ್ದಳು. ಆದರೆ, 586 ಪುಟಗಳ ತೀರ್ಪಿನಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸಿ ಈ ಬಗ್ಗೆ ಗಮನಹರಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

    ಗ್ರೀಷ್ಮಾ ಹಂತ ಹಂತವಾಗಿ ಈ ಕೃತ್ಯ ಎಸಗಲು ಸಂಚು ರೂಪಿಸಿದ್ದಳು. ಆಕೆಗೆ ಕ್ರಿಮಿನಲ್ ಹಿನ್ನೆಲೆ ಇಲ್ಲ ಎನ್ನಲು ಸಾಧ್ಯವಿಲ್ಲ. ಏಕೆಂದರೆ ಆಕೆ ಈ ಮೊದಲು ಕೂಡ ಯುವಕನನ್ನು ಕೊಲೆ ಮಾಡಲು ಯತ್ನಿಸಿದ್ದಳು. ತನಿಖೆಯನ್ನು ಬೇರೆಡೆಗೆ ತಿರುಗಿಸಲು ಬಂಧನದ ನಂತರವೂ ಆಕೆ ಆತ್ಮಹತ್ಯೆಯ ನಾಟಕವಾಡಿದ್ದಳು ಎಂದು ಕೋರ್ಟ್ ಹೇಳಿದೆ. ಪ್ರಾಸಿಕ್ಯೂಟರ್ ಪ್ರಕಾರ, ಆ ಯುವತಿಯ ಕೃತ್ಯಗಳು ಸಮಾಜಕ್ಕೆ ಹಾನಿಕಾರಕ ಸಂದೇಶವನ್ನು ರವಾನಿಸಿದ್ದವು ಮತ್ತು ಪ್ರೀತಿಯ ಪಾವಿತ್ರ‍್ಯವನ್ನು ಹಾಳು ಮಾಡಿದೆ ಎಂದು ಕೋರ್ಟ್ ತೀರ್ಪು ನೀಡಿದೆ.

    2022ರ ಅ. 25ರಂದು ಶರೋನ್ ರಾಜ್ ವಿಷಪೂರಿತ ಜ್ಯೂಸ್ ಸೇವಿಸಿದ ಬಳಿಕ ಆತನ ಆರೋಗ್ಯ ಹದಗೆಟ್ಟಿತ್ತು. ಇದಾದ 11 ದಿನಗಳ ನಂತರ, ಅವರು ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದರು.

    ಗ್ರೀಷ್ಮಾಗೆ ನಾಗರಕೋಯಿಲ್‌ನ ಸೇನಾ ಸಿಬ್ಬಂದಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ ಆಕೆ ತನ್ನ ಪ್ರೇಮಿಯಾಗಿದ್ದ ಶರೋನ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಆತನನ್ನು ತನ್ನ ಜೀವನದಿಂದ ದೂರವಿಡಲು ಪ್ರಯತ್ನಿಸಿದ್ದಳು. ಇದಕ್ಕೆ ಶರೋನ್ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಗ್ರೀಷ್ಮಾ ಶರೋನ್ ಕೊಲೆಗೆ ಸಂಚು ರೂಪಿಸಿದ್ದು, ಆತನನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಶರೋನ್‌ಗೆ ಆಯುರ್ವೇದಿಕ್ ಕೀಟನಾಶಕ ಬೆರೆಸಿದ ಜ್ಯೂಸ್ ನೀಡಿದ್ದಳು. ಇದರಿಂದಾಗಿ ಶರೋನ್ ಅನಾರೋಗ್ಯಕ್ಕೀಡಾಗಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ.

    Post Views: 324

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.