Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»2,000 ಕೋಟಿ ರೂ.ಗೂ ಹೆಚ್ಚು ಸೈಬ‌ರ್ ವಂಚನೆ ನಡೆಸಿದ ತಂಡವೊಂದರ ಕಿಂಗ್‌ಪಿನ್‌ ಬಂಧನ
    ಇತ್ತೀಚಿನ ಸುದ್ದಿ

    2,000 ಕೋಟಿ ರೂ.ಗೂ ಹೆಚ್ಚು ಸೈಬ‌ರ್ ವಂಚನೆ ನಡೆಸಿದ ತಂಡವೊಂದರ ಕಿಂಗ್‌ಪಿನ್‌ ಬಂಧನ

    January 29, 2025
    Share

    ಜೈಪುರ: 2,000 ಕೋಟಿ ರೂ.ಗೂ ಹೆಚ್ಚು ಸೈಬ‌ರ್ ವಂಚನೆ ನಡೆಸಿದ ತಂಡವೊಂದರ ಕಿಂಗ್‌ಪಿನ್‌ನನ್ನು ಶ್ರೀಗಂಗಾನಗರದಲ್ಲಿ ಬಂಧಿಸುವ ಮೂಲಕ ಭಾರಿ ವಂಚನೆ ಭೇದಿಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

    ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ಆರೋಪಿಗಳ ವಿರುದ್ಧ ದೇಶಾದ್ಯಂತ ಸೈಬ‌ರ್ ವಂಚನೆಯ ದೂರುಗಳಿವೆ, ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

    ಗಂಗಾನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಯಾದವ್ ಮಾತನಾಡಿ, ಬಂಧಿತ ಅಜಯ್ ಆರ್ಯ ಮತ್ತು ಆತನ ಸಹಚರರು ಸಾವಿರಾರು ಜನರಿಗೆ ಸುಮಾರು 2,000 ಕೋಟಿ ರೂಪಾಯಿಗಳ ಸೈಬರ್ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕದ ನಿವಾಸಿ ಕಾಂತಪ್ಪ ಬಾಬು ಚವ್ಹಾಣ್‌ ಅವರು ಮಂಗಳವಾರ ಪುರಾಣಿ ಅಬಾದಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕರ್ನಾಟಕದ ಕ್ಯಾಪ್ರೋರ್ಎಫ್‌ಎಕ್ಸ್ ಕಂಪನಿಯಲ್ಲಿ ಲಕ್ಷಗಟ್ಟಲೆ ರೂಪಾಯಿಗಳನ್ನು ಹೂಡಿಕೆ ಮಾಡಿದ್ದು, ವಂಬ ಶ್ರೀಗಂಗಾನಗರಕ್ಕೆ ಪಲಾಯನಗೈದಿದ್ದರು ಎಂದು ತಿಳಿಸಿದ್ದಾರೆ.

    ಪೊಲೀಸರು ಆರ್ಯ ಮನೆ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ. ಶೋಧದ ವೇಳೆ 10 ಲಕ್ಷ ರೂಪಾಯಿ ನಗದು, ಮೂರು ಸಿಪಿಯುಗಳು, ಆರು ಮೊಬೈಲ್‌ ಫೋನ್‌ಗಳು, ಎಂಟು ಎಟಿಎಂ ಕಾರ್ಡ್‌ಗಳು, ಮೂರು ಪ್ಯಾನ್ ಕಾರ್ಡ್‌ಗಳು, ಸುಮಾರು 85 ಲಕ್ಷ ರೂಪಾಯಿ ಮೌಲ್ಯದ ಐಷಾರಾಮಿ ಕಾರು ಮತ್ತು ಸೈಬ‌ರ್ ವಂಚನೆಗೆ ಸಂಬಂಧಿಸಿದ ಇತರ ದಾಖಲೆಗಳು ಪತ್ತೆಯಾಗಿವೆ.

    ಅಜಯ್ ಆರ್ಯ, ದೀಪಕ್ ಆರ್ಯ, ಲಜಪತ್ ಆರ್ಯ, ಸೌರಭ್ ಚಾವ್ಹಾ, ಅವರ ಪತ್ನಿ ಸಲೋನಿ ಚಾವ್ಹಾ, ಕರಮ್‌ಜಿತ್ ಸಿಂಗ್, ಬಲ್ಟಿತ್ ಸಿಂಗ್, ರಾಜೇಂದ್ರ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳು 2022 ರಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಟೆಕ್ಸಲ್ ಟೆಕ್ ಎಂಬ ಕಂಪನಿಯನ್ನು ತೆರೆದು ಜನರಿಗೆ ಸೈಬರ್ ತರಬೇನಿ ನೀಡಲು ಪ್ರಾರಂಭಿಸಿದ್ದರು ಎಂದು ತನಿಖೆಯಿ ತಿಳಿದುಬಂದಿದೆ.

    Post Views: 174

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.