Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಡಿಜಿಟಲ್‌ ಅರೆಸ್ಟ್‌ ವಂಚನೆ: ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಡಿಜಿಟಲ್‌ ಅರೆಸ್ಟ್‌ ವಂಚನೆ: ಆರೋಪಿ ಬಂಧನ

    February 3, 2025
    Share

    ಉಡುಪಿ: ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ನಗರದ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಯಾದಗಿರಿ ಜಿಲ್ಲೆಯ ಶಹಾಪುರದ ಕಿರಣ್‌ (24) ಬಂಧಿತ ಆರೋಪಿ. ಆತನಿಂದ ₹7 ಲಕ್ಷ ವಶಪಡಿಸಿಕೊಳ್ಳಲಾಗಿದೆ.ಉಡುಪಿ ಕನ್ನಾರ್‌ ಸಂತೋಷ ಕುಮಾರ್‌ ಎಂಬುವರಿಗೆ ಅಪರಿಚಿತರು ಕರೆಮಾಡಿ, ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುತ್ತಿದ್ದು, ನಿಮ್ಮ ಮೊಬೈಲ್‌ ಸಂಖ್ಯೆಯಿಂದ ಕಾನೂನುಬಾಹಿರ ಜಾಹೀರಾತು ಹಾಗೂ ಸಂದೇಶ ಹೋಗಿದೆ ಎಂದು ತಿಳಿಸಿದ್ದರು.

    ನಿಮ್ಮ ಮೇಲೆ ಒಟ್ಟು 17 ಎಫ್‌ಐಆರ್‌ ಆಗಿದ್ದು, ಎರಡು ಗಂಟೆಯೊಳಗೆ ನಿಮ್ಮ ಹೆಸರಿನಲ್ಲಿರುವ ಸಂಖ್ಯೆಗಳನ್ನು ಸ್ಥಗಿತಗೊಳಿಸುತ್ತೇವೆ. ನಿಮ್ಮ ಮೇಲೆ ಅರೆಸ್ಟ್ ವಾರಂಟ್‌ ಆಗಿದೆ ಎಂದೂ ಹೆದರಿಸಿದ್ದರು.ಸಂತೋಷ ಕುಮಾರ್‌ ಅವರಿಗೆ ವಿಡಿಯೊ ಕರೆ ಮಾಡಿದ್ದು, ಕರೆ ಮಾಡಿದ ವ್ಯಕ್ತಿಯು ಪೊಲೀಸ್‌ ಅಧಿಕಾರಿ ಸಮವಸ್ತ್ರದಲ್ಲಿದ್ದು, ಅಂಧೇರಿ ಈಸ್ಟ್‌ ಮುಂಬೈನ ಸೈಬರ್‌ ವಿಭಾಗದ ಇನ್‌ಸ್ಪೆಕ್ಟರ್‌ ಎಂದು ಹೇಳಿದ್ದ. ಅಲ್ಲದೆ, ನಿಮ್ಮ ಆಧಾರ್ ಕಾರ್ಡ್‌ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಯಲ್ಲಿ ಹಣ ಅಕ್ರಮ ವರ್ಗಾವಣೆಯಾಗಿದೆ ಎಂದೂ ತಿಳಿಸಿದ್ದ. ಆದಾಯದ ಮೂಲ ಪರಿಶೀಲಿಸುವುದಾಗಿ ತಿಳಿಸಿ ಸಂತೋಷ್‌ ಕುಮಾರ್‌ ಅವರ ಬ್ಯಾಂಕ್‌ ಖಾತೆ ಹಾಗೂ ಅದರಲ್ಲಿನ ಹಣದ ವಿವರವನ್ನು ಪಡೆದು, ನಿಮ್ಮನ್ನು ವರ್ಚುವಲ್‌ ಅರೆಸ್ಟ್‌ ಮಾಡುವುದಾಗಿ ತಿಳಿಸಿ, ಸಂತೋಷ್‌ ಅವರ ಬ್ಯಾಂಕ್‌ ಖಾತೆಯಿಂದ ₹89 ಲಕ್ಷ ವರ್ಗಾಯಿಸಿಕೊಂಡಿದ್ದಾನೆ. ಈ ಕುರಿತು ಸಂತೋಷ್‌ ಅವರು ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಸೆನ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಸೆನ್ ಪೊಲೀಸ್ ಠಾಣೆಯ ಪ್ರವೀಣ ಕುಮಾರ್, ಪ್ರವೀಣ, ರಾಜೇಶ್‌, ಉಡುಪಿ ನಗರ ಠಾಣೆಯ ಎ.ಎಸ್.ಐ. ಸುಭಾಸ್‌, ಪಡುಬಿದ್ರಿ ಠಾಣಾ ಎ.ಎಸ್.ಐ ರಾಜೇಶ್ ಪಿ., ದಿಕ್ಷೀತ್‌, ಸುಕನ್ಯಾ ಮತ್ತು ಜ್ಯೋತಿ ಅವರನ್ನೊಳಗೊಂಡ ತಂಡವು ಕೇರಳದಲ್ಲಿ ಹಾಗೂ ಮಹಾರಾಷ್ಟ್ರದ ಪುಣೆಯಲ್ಲಿ ಕಾರ್ಯಾಚರಣೆ ನಡೆಸಿತ್ತು. ಬಳಿಕ ಆರೋಪಿಯನ್ನು ಧಾರವಾಡದಲ್ಲಿ ಬಂಧಿಸಿದೆ.

    Post Views: 127

    Related Posts

    ಉಡುಪಿ : ತೋಡಿಗೆ ಬಿದ್ದು ವ್ಯಕ್ತಿ ಸಾವು..!

    June 16, 2025

    ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

    June 16, 2025

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.