Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆಯಿಂದ (ಫೆಬ್ರವರಿ 7) ಮಂಗಳೂರಿನಲ್ಲಿ ಐಸ್ ಕ್ರೀಮ್ ಪರ್ಬ-2025
    ಇತ್ತೀಚಿನ ಸುದ್ದಿ

    ನಾಳೆಯಿಂದ (ಫೆಬ್ರವರಿ 7) ಮಂಗಳೂರಿನಲ್ಲಿ ಐಸ್ ಕ್ರೀಮ್ ಪರ್ಬ-2025

    February 6, 2025
    Share

    ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆಬ್ರವರಿ 7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ.

    2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕಿರಣ್ ಶೆಣೈ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
    ಮಂಗಳೂರನ್ನು ಐಸ್ ಕ್ರೀಮ್ ಕ್ಯಾಪಿಟಲ್ ಆಫ್ ಇಂಡಿಯಾ ಎಂದು ಕರೆಯುವ ಈ ಸಂದರ್ಭದಲ್ಲಿ ಎಲ್ಲಾ ಐಸ್ ಕ್ರೀಮ್ ಸಂಸ್ಥೆಗಳನ್ನ ಒಂದೇ ಸೂರಿನಡಿ ಸೇರಿಸಬೇಕು ಅನ್ನುವ ಆಲೋಚನೆ ಆಯೋಜಕರದ್ದು, ಹಾಗಾಗಿ ಈ ಬಾರಿ 14 ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ.

    ಭಾಗವಹಿಸುವ ಐಸ್ ಕ್ರೀಮ್ ಸಂಸ್ಥೆಗಳು ಐಡಿಯಲ್ – ಪಬ್ಬಾಸ್ , ಹ್ಯಾಂಗ್ಯೋ, ಮ್ಯಾಂಗೋ ಬೆರ್ರಿಸ್ , ಎಂಚಿ ಕ್ರಂಚಿ – ದಿ ಮಿಲೆಟ್ ಹೌಸ್ , ಸ್ಕೂಪ್ಸೊ , ಕೈಲಾರ್ಸ್ , ಸ್ವಿರ್ಲಿಯೊ , ಎಫ್ 5, ಐಸ್ ಕ್ರೀಮ್ ಆಂಡ್ ಮೋರ್ , ಫ್ರೂಟ್ ಪೊಪ್ಜ್ , ಫ್ಲೇವರ್ಸ್ , ಹೈವ್ ಸ್ಕ್ಯೂಬ್ , ಬೊನ್ ಬೊನ್ಸ್, ಕ್ಯಾಮೆರಿ ಬ್ರಾಂಡ್ ಗಳು ಭಾಗವಹಿಸಲಿದೆ.


    2024 ರಲ್ಲಿ ನಡೆದ ಐಸ್ ಕ್ರೀಮ್ ಪರ್ಬದ ಮೊದಲ ಆವೃತ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಉತ್ತಮ ಸ್ಪಂದನೆ ಸಿಕ್ಕಿತ್ತು. ಈ ಬಾರಿಯೂ ಅತೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದ್ದು, ಸಾಮಾಜಿಕ ಜಾಲತಾಣ ಇನ್ನಾ ಗ್ರಾಮ್ ನಲ್ಲಿ ಟ್ರೈ ತಿಂಡಿ ಚಾನೆಲ್ ಪ್ರಸಾರ ಮಾಡಿದ ವಿಡಿಯೋ 6 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು 50 ಸಾವಿರ ಜನ ಹಂಚಿಕೊಂಡಿದ್ದಾರೆ.


    ಫೆಬ್ರವರಿ 7 ರಂದು ಸಂಜೆ 5 ಘಂಟೆಗೆ ಖ್ಯಾತ ಯುಟ್ಯೂಬರ್ ಭಟ್‌ & ಭಟ್‌ ಸಹೋದರರಾದ ಸುದರ್ಶನ್ ಭಟ್ ಮತ್ತು ಮನೋಹರ್ ಭಟ್ ಅವರು ಯುಟ್ಯೂಬ್ ನಲ್ಲಿ 12 ಲಕ್ಷಕ್ಕೂ ಹೆಚ್ಚು ಫಾಲ್ಲೋರ್ಸ್ ಗಳನ್ನೂ ಗಳಿಸಿ ರೆಸಿಪಿ ಕ್ಷೇತ್ರದಲ್ಲಿ ಇತಿಹಾಸವನ್ನೇ ಸೃಷ್ಟಿಸಿದ ವಿಶೇಷ ಸಾಧನೆಗಾಗಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸನ್ಮಾನ ಕಾರ್ಯಕ್ರಮಕ್ಕೆ ಇಚೈ ಮಂಗಳೂರು ಬ್ರಾಂಚಿನ CA.ಗೌತಮ್ ಪೈ ಉಪಸ್ಥಿತರಿರಲಿದ್ದಾರೆ.

    ಜೊತೆಗೆ ಐಸ್ ಕ್ರೀಮ್ ಪರ್ಬದಲ್ಲಿ ಭಾಗವಹಿಸುವ ಐಸ್ ಕ್ರೀಮ್ ಸಂಸ್ಥೆಗಳ ಮಾಲೀಕರು ಕೂಡ ಜೊತೆಯಾಗಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8317489506 ಸಂಪರ್ಕಿಸಬಹುದಾಗಿದೆ.
    ಪತ್ರಿಕಾ ಗೋಷ್ಠಿಯಲ್ಲಿ ಅಭಿಷೇಕ್ ಶೆಟ್ಟಿ ಉಪಸ್ಥಿತರಿದ್ದರು.

    Post Views: 256

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.