ಉಡುಪಿ : ಪಡಿಬಿದ್ರಿ ಪೇಟೆಯಲ್ಲಿ 20 ದಿನಗಳ ಹಿಂದೆ ಬುಲೆಟ್ ಬೈಕ್ ಕಳ್ಳತನವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೂಳೆಬೈಲು ನಿವಾಸಿ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ.ಕೆ ಯಾನೆ ತಾಜು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಏನಿದು ಪ್ರಕರಣ ?
ಜನವರಿ 21ರಂದು ರಾತ್ರಿ ಮುಂಡ್ಕೂರು ನಿವಾಸಿ ಪರೀಕ್ಷಿತ್ ಶೆಟ್ಟಿ ಎಂಬವರು ಪಡುಬಿದ್ರಿ ಪೇಟೆಯಲ್ಲಿ ಬುಲೆಟ್ ಬೈಕ್ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ ಕೆಲಸ ಮುಗಿಸಿ ವಾಪಸ್ ಬಂದು ನೋಡಿದಾಗ ಅಲ್ಲಿ ಬೈಕ್ ಇರಲಿಲ್ಲ. ಬೈಕನ್ನು ಕಳವು ಮಾಡಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗದಲ್ಲಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಇದನ್ನೂ ಓದಿ : ರಿಕ್ಷಾ ಹಾಗೂ ಹೊಂಡಾ ಆಕ್ಟಿವಾ ನಡೆವೆ ಅಪಘಾತ; ಸವಾರರಿಗೆ ಗಾಯ ಸದ್ಯ ಪೊಲೀಸರ ಬಲೆಗೆ ಬಿದ್ದ ಕಳ್ಳರಿಂದ ಪಡುಬಿದ್ರಿಯಲ್ಲಿ ಕಳವು ಮಾಡಿದ ಬುಲೆಟ್ ಮತ್ತು ಕಳ್ಳತನ ಸಮಯ ಉಪಯೋಗಿಸಿದ ಕಾರನ್ನು ಸ್ವಾಧೀನ ಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.




