Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : ನಕಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ವಿಟ್ಲ : ನಕಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್

    February 22, 2025
    Share

    ವಿಟ್ಲ : ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಣ್ಣೂರು ನಿವಾಸಿ ಅಬ್ದುಲ್‌ ನಾಸೀರ್‌(52) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಇದೀಗ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

    ದರೋಡೆ ಪ್ರಕರಣದಲ್ಲಿ ಸದ್ಯಕ್ಕೆ ಬಂಧಿತನಾಗಿರುವ ಕಣ್ಣೂರು ಮೂಲದ ಅಬ್ದುಲ್‌ ನಾಸೀರ್‌, ಸ್ಥಳೀಯ ಆರೋಪಿ ಸಿರಾಜುದ್ದೀನ್‌ ಹಾಗೂ ಪ್ರಧಾನ ಸೂತ್ರಧಾರಿ ಎಎಸ್‌ಐ ಮಧ್ಯೆ ಸಂಪರ್ಕ ಸೇತುವಾಗಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸಿಂಗಾರಿ ಬೀಡಿ ಸಂಸ್ಥೆಯಲ್ಲಿ ಬೀಡಿ ಪ್ಯಾಕಿಂಗ್‌ ಕಾರ್ಯ ನಿರ್ವಹಿಸುತ್ತಿದ್ದ ಸಿರಾಜುದ್ದೀನ್‌ ತನ್ನ ಮಾಲಕನ ಮೇಲಿನ ಮನಸ್ತಾಪದಿಂದ ಕೆಲಸ ತ್ಯಜಿಸಿದ್ದ. ಜತೆಗೆ ಮಾಲಕನ ವಿರುದ್ಧ ಸೇಡು ತೀರಿಸಲು ಇ.ಡಿ.ಗೆ ದೂರು ನೀಡುವುದಾಗಿ ಹೇಳುತ್ತಿದ್ದ. ಸಿರಾಜುದ್ದೀನ್‌ನ ಸೇಡಿನ ವಿಚಾರವನ್ನು ಎಎಸ್‌ಐಗೆ ತಿಳಿಸಿ ಇಂತಹ ನಕಲಿ ಇಡಿ ದಾಳಿ ಸಂಘಟಿಸಲು ನಾಸೀರ್‌ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.
    ಈ ಪ್ರಕರಣದಲ್ಲಿ ಈ ಹಿಂದೆ ಪೊಲೀಸರು ತ್ರಿಶೂರು ಕೊಡಂಗಲ್ಲೂರು ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿದ್ದ ಶಫೀರ್‌ ಬಾಬು (48), ಬಿ.ಸಿ.ರೋಡು ಪರ್ಲಿಯಾ ನಿವಾಸಿ ಮಹಮ್ಮದ್‌ ಇಕ್ಬಾಲ್‌(38), ಕೊಳ್ನಾಡು ಗ್ರಾಮ ನಿವಾಸಿ ಸಿರಾಜುದ್ದೀನ್‌ ನಾರ್ಶ(37), ಮಂಗಳೂರು ಪಡೀಲು ನಿವಾಸಿ ಮಹಮ್ಮದ್‌ ಅನ್ಸಾರ್‌ (27), ಕೇರಳದ ಕೊಟ್ಟಾಯಂ ನಿವಾಸಿಗಳಾದ ಅನಿಲ್‌ ಫೆರ್ನಾಂಡಿಸ್‌(49), ಸಚಿನ್‌ ಟಿ.ಎಸ್‌.(29) ಹಾಗೂ ಶಬಿನ್‌ ಎಸ್‌.(27) ಅವರನ್ನು ಬಂಧಿಸಿದ್ದಾರೆ.

    ಸದ್ಯ ಈ ಪ್ರಕರಣದಲ್ಲಿ ದರೋಡೆ ಆಗಿರುವ ಹಣದ ಬಗ್ಗೆ ಬಾರೀ ಗುಸುಗುಸು ಆರಂಭವಾಗಿದ್ದು, ಕೋಟಿಗಟ್ಟಲೆ ಹಣ ದರೋಡೆ ಆಗಿದೆ ಎಂಬ ಮಾತು ಎಲ್ಲೆಡೆ ಕೇಳಿ ಬರಲಾರಂಭಿಸಿದೆ.

    Post Views: 198

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.