Facebook Twitter Instagram
    Tuesday, June 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ಮುಂದೆ ಲಾಂಗು, ಮಚ್ಚು ಪ್ರದರ್ಶಿಸಿದರೆ ‘ಗೂಂಡಾ ಕಾಯ್ದೆ’ ದಾಖಲು : ಗೃಹ ಸಚಿವ ಡಾ. ಜಿ.ಪರಮೇಶ್ವರ್
    ಇತ್ತೀಚಿನ ಸುದ್ದಿ

    ಇನ್ಮುಂದೆ ಲಾಂಗು, ಮಚ್ಚು ಪ್ರದರ್ಶಿಸಿದರೆ ‘ಗೂಂಡಾ ಕಾಯ್ದೆ’ ದಾಖಲು : ಗೃಹ ಸಚಿವ ಡಾ. ಜಿ.ಪರಮೇಶ್ವರ್

    March 7, 2025
    Share

    ಬೆಂಗಳೂರು : ಇನ್ಮುಂದೆ ಮಚ್ಚು, ಲಾಂಗ್ ತೋರಿಸುವವರು, ಕಾನಾನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

    ಜೆಡಿಎಸ್ ನಾಯಕ ಎಸ್.ಎಲ್.ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಳೆದ 2-3 ವರ್ಷಗಳ ಅವಧಿಯಲ್ಲಿ ನಡೆದಿರುವ ವಿವಿಧ ಅಪರಾಧ ಪ್ರಕರಣಗಳು, ಕೈಗೊಂಡ ಕ್ರಮ, ಅಪರಾಧಿಗಳ ಬಂಧನ ಕುರಿತು ಅಂಕಿ ಅಂಶಗಳ ಸಹಿತ ವಿವರಿಸಿ, ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಸಮಾಜದ ಶಾಂತಿ ಹಾಳು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಗೂಂಡಾ ಕಾಯ್ದೆಯಡಿ ಮೂರು ವರ್ಷಗಳಲ್ಲಿ 139 ಗೂಂಡಾಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಪೊಲೀಸ್ ಠಾಣೆಗಳಲ್ಲಿ ಬೀಟ್ ವ್ಯವಸ್ಥೆ ಹೆಚ್ಚಿಸಲಾಗಿದೆ. ಹೊಯ್ಸಳ ಗಸ್ತು ಕರ್ತವ್ಯ ಬಲಪಡಿಸಲಾಗಿದೆ. ನಗರದ ಯಾವುದೇ ಸ್ಥಳದಿಂದ 112ಗೆ ಕರೆ ಮಾಡಿದರೆ ಸರಾಸರಿ 9 ನಿಮಿಷಗಳಲ್ಲಿ ಸ್ಥಳಕ್ಕೆ ಹೊಯ್ಸಳ ಬರುವ ವ್ಯವಸ್ಥೆ ಮಾಡಲಾಗಿದೆ.

    ವ್ಹೀಲಿಂಗ್ ಮಾಡುವುದಲ್ಲದೆ ಚಾಕು, ಚೂರಿ ಹಾಗೂ ಲಾಂಗ್ ಹಿಡಿದುಕೊಂಡು ಓಡಾಡಿ ಸಮಾಜದ ಸ್ವಾಸ್ಥ್ಯ ಕದಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕಳೆದ ಮೂರು ವರ್ಷಗಳಲ್ಲಿ, 1,342 ಪ್ರಕರಣಗಳು ದಾಖಲಾಗಿದ್ದು, 1,046 ವ್ಯಕ್ತಿಗಳನ್ನು ಬಂಧಿಸಲಾಗಿದೆ.ರಾಜ್ಯದೆಲ್ಲೆಡೆ ದಾಖಲಾದ ಒಟ್ಟು ವ್ಹೀಲಿಂಗ್ ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲಿ 893 ಪ್ರಕರಣ ದಾಖಲಾಗಿದ್ದು, 788 ಮಂದಿಯನ್ನು ಬಂಧಿಸಲಾಗಿದೆ. ರಾಜ್ಯದ ಇತರೆಡೆ 449 ಪ್ರಕರಣ ದಾಖಲಾಗಿದ್ದು, 258 ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದೇವೆಂದು ಹೇಳಿದರು.

    Post Views: 201

    Related Posts

    ಐದು ವರ್ಷಗಳ ನಿರಾಸೆ ಕೊನೆಗೊಳ್ಳಲಿ! ನವಯುಗ ಎಕ್ಸ್‌ಪ್ರೆಸ್ ಪುನರಾರಂಭಕ್ಕೆ ಕರಾವಳಿ ಜನರ ಆನ್‌ಲೈನ್ ಹೋರಾಟ

    June 9, 2025

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.