Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ನ್ಯಾಯಾಲಯದಿಂದ ನಿರ್ಬಂಧ ಆದೇಶ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ನ್ಯಾಯಾಲಯದಿಂದ ನಿರ್ಬಂಧ ಆದೇಶ

    March 26, 2025
    Share

    ಬೆಂಗಳೂರು : ಧರ್ಮಸ್ಥಳ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನ-ಅಪಪ್ರಚಾರ ಮಾಡುವವರ ವಿರುದ್ಧ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯವು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಒಎಸ್ 2145/2025 ಪ್ರಕರಣದಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಈ ಆದೇಶದನ್ವಯ ಯಾರೇ ಆಗಲಿ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಾಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆವಕಾಶವಿರುವುದಿಲ್ಲ.

    ಏನಿದು ಜಾನ್ ಡೋ (ಅಶೋಕ ಕುಮಾರ್) ಆದೇಶ? ‘ಜಾನ್ ಡೋ’ ಆದೇಶ ಅಂದರೆ ಯಾವುದೇ ಅಪರಿಚಿತನ ವಿರುದ್ಧ ಹೊರಡಿಸುವ ನಿರ್ಬಂಧ ಆದೇಶ. ಒಬ್ಬ ವ್ಯಕ್ತಿ ಅಥವಾ ಸಂಸ್ಥೆಗೆ ಅಪರಿಚಿತ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡುವ ಆದೇಶವಿದು. ಯಾರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆಯೋ ಆ ವ್ಯಕ್ತಿ ಅಥವಾ ಸಂಸ್ಥೆಯ ಗುರುತು ಗೊತ್ತಿಲ್ಲದಿದ್ದಾಗ ಈ ‘ಜಾನ್ ಡೋ’ ಆದೇಶ ಅಥವಾ ನಿರ್ಬಂಧ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಆನ್‌ಲೈನ್‌ನಲ್ಲಿ ಗುರುತು ಮುಚ್ಚಿಟ್ಟು ಯಾವುದಾದರೂ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಬರೆಯುವವರ ವಿರುದ್ಧ ಈ ಆದೇಶ ಹೊರಡಿಸಲಾಗುತ್ತದೆ. ಭಾರತದಲ್ಲಿ ಇದಕ್ಕೆ ‘ಅಶೋಕ್ ಕುಮಾರ್’ ನಿರ್ಬಂಧ ಎಂದು ಹೇಳಲಾಗುತ್ತದೆ.

    ಈ ಆದೇಶದ ಪ್ರಕಾರ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳು ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಅಪಪ್ರಚಾರ ಮಾಡುವುದು, ಅಂತಹ ವಿಚಾರಗಳನ್ನು ಹಂಚಿಕೊಳ್ಳುವುದು ಅಥವಾ ಹರಡುವುದಕ್ಕೆ ನಿಷೇಧ ಇರುತ್ತದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ. ಈ ಪ್ರಕರಣದಲ್ಲಿ ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಾದಿಸಿದ್ದರು.

    Post Views: 127

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.