ಬೆಂಗಳೂರು: ಪತ್ನಿಯೇ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ.

ಮೊದಲು ಓಂ ಪ್ರಕಾಶ್ ಹತ್ಯೆ ಬಗ್ಗೆ ಅವರ ಪತ್ನಿ ಮಾಹಿತಿ ನೀಡಿದ್ದರು. ಆದರೆ ತದನಂತರ ಸ್ವತಹ ಓಂ ಪ್ರಕಾಶ್ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಕೊಡಲೇ ಅವರ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಸದ್ಯ ಓಂ ಪ್ರಕಾಶ್ ಅವರ ಮೃತದೇಹವನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ಲಭ್ಯವಾಗಬೇಕಿದೆ.