ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಛೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದಿನಾಂಕ 24.04.2025ರಂದು ಬ್ಯಾಂಕಿನ ಆಡಳಿತ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶ್ರೀಮತಿ ಕ್ಯಾರೆನ್ ಕ್ರಾಸ್ತಾ ತಂಡದಿAದ ಪ್ರಾರ್ಥನಾ ಗೀತೆಯೊಂದಿಗೆ ಸಭೆ ಪ್ರಾರಂಭವಾಯಿತು.
ಈ ಸಂದರ್ಭದಲ್ಲಿ ಫಾ| ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನೀರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಹಾಜರಿದ್ದರು. ವಂ. ಪೌಸ್ತಿನ್ ಲೋಬೊ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿ ಅವರು ಹಲವಾರು ಸಂದರ್ಭಗಳಲ್ಲಿ ಪೋಪ್ ಆವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡರು. ಪರಮಪೂಜ್ಯ ಪೋಪ್ ಪ್ರಾನ್ಸಿಸ್ ದ್ವನಿಯಿಲ್ಲದವರ ದ್ವನಿ ಎಂದು ಅವರು ಹೇಳಿದರು. ಅವರು ತಮ್ಮ ಗುರು ಯೇಸುಕಿಸ್ತನನ್ನು÷್ನ ಭವ್ಯತೆಯಲ್ಲಿ ಅಲ್ಲ, ಬಡವರು ಮತ್ತು ದೀನದಲಿತರಲ್ಲಿ ಕಂಡರು.

ತಮ್ಮ ಜೀವನದುದ್ದಕ್ಕೂ ಸರಳ ಮತ್ತು ವಿನಮ್ರ ಜೀವನಶೈಲಿಯನ್ನು ನಡೆಸುವ ಮೂಲಕ ಸಂತ ಫ್ರಾನ್ಸಿಸ್ ಅಸ್ಸಿಸಿಯ ಹೆಜ್ಜೆಗಳನ್ನು ಅಕ್ಷರಶ: ಅನುಸರಿಸಿದರು. ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಪ್ರಗತಿಪರರಾಗಿದ್ದರು ಮತ್ತು ಅನಗತ್ಯ ಮತ್ತು ಅಪ್ರಸ್ತುತ ಅಭ್ಯಾಸಗಳನ್ನು ತೆಗೆದುಹಾಕುವಲ್ಲಿ ನಂಬಿಕೆ ಇಟ್ಟಿದರು. ಪ್ರಪಂಚದಾದ್ಯAತ ಯುದ್ದಗಳು ಮತ್ತು ಸಂಘರ್ಷಗಳಿAದಾಗಿ ಬಳಲುತ್ತಿರುವ ಮಾನವಕುಲದ ಬಗ್ಗೆ ಅವರು ಆಳವಾದ ಸಹಾನಭೂತಿಯನ್ನು ಹೊಂದಿದ್ದರು. ಅವರು ಜನರಲ್ಲಿ ಅಂತರ್ ಧರ್ಮೀಯ ಸಾಮರಸ್ಯವನ್ನು ಪ್ರತಿಪಾದಿಸಿದರು ಮತ್ತು ಶಾಂತಿಯನ್ನು ತರಲು ಬಯಸಿದರು. ಅವರು ಮಾನವಕುಲದ ಸುಧಾರಣೆಗಾಗಿ ನಿಜವಾದ ಅರ್ಥದಲ್ಲಿ ಶ್ರಮಿಸುವ ಜಾಗತಿಕ ವ್ಯಕ್ತಿತ್ವ (ವಿಶ್ವ ಮಾನವ) ಆಗಿದ್ದರು. ಅವರ ನಿಧನದಿಂದಾಗಿ ಜಗತ್ತು ಅನಾಥವಾಗಿದೆ ಮತ್ತು ಅವರ ಪವಿತ್ರತೆಯು ನಮ್ಮ ಜೀವನದಲ್ಲಿ ಅವರ ಆದರ್ಶಗಳನ್ನು ಅನುಸರಿಸಲು ನಮ್ಮ ಬೆಳಕಿನ ದಾರಿದೀಪವಾಗಲಿ ಎಂದು ಅವರು ಹಾರೈಸಿದರು.
ಬ್ಯಾಂಕಿನ ನಿರ್ದೇಶಕಿ ಶ್ರೀಮತಿ ಐರಿನ್ ರೆಬೆಲ್ಲೊ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರು ರೋಮನ್ ಕ್ಯಾಥೋಲಿಕ್ ಚರ್ಚ್ನ ಸರ್ವೋಚ್ಛ ಮಠಾಧೀಶರಾಗಿ ವಹಿಸಿದ್ದ ಸ್ಥಾನಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಾ ಅವರು ಸಾಗಿದ ಹಾದಿಯನ್ನು ಪ್ರಸ್ತುತಪಡಿಸಿದರು. ಪೋಪ್ ಫ್ರಾನ್ಸಿಸ್ ಅವರ ಜೀವನ ಪ್ರಯಾಣವನ್ನು ಪ್ರಸ್ತುತಪಡಿಸುವಾಗ, ಆವರು ಪೋಪ್ರ ಸರಳತೆ, ರೋಗಿಗಳು, ಬಡವರು ಮತ್ತು ದೀನದಲಿತರ ಬಗ್ಗೆ ಅವರ ಕಾಳಜಿಯನ್ನು ಎತ್ತಿ ತೋರಿಸಿದರು. ಪುರಾತನ ಪದ್ದತಿಗಳು ಮತ್ತು ನಂಬಿಕೆಗಳನ್ನು ನಿರ್ಮೂಲನೆ ಮಾಡುವಲ್ಲಿ ಮತ್ತು ಬಡವರ ಜೀವನವನ್ನು ಸುಧಾರಿಸುವಲ್ಲಿ ಅವರ ಪ್ರಯತ್ನಗಳನ್ನು ಅವರು ವಿವರಿಸಿದರು. ಮಹಿಳೆಯರನು ಸಬಲೀಕರಣಗೊಳಿಸುವಲ್ಲಿ ಅವರ ಪ್ರಯತ್ನಗಳನ್ನು ಸಹ ಅವರು ವಿವರಿಸಿದರು. ಹ್ರದಯದ ಶುದ್ದತೆ ಮತ್ತು ಮಾನವಕುಲದ ಮೇಲಿನ ಅತ್ಯಂತ ಪ್ರೀತಿಯೊಂದಿಗೆ ದೈವಿಕ ಅನುಗ್ರಹವನ್ನು ಪ್ರತಿಬಿಂಬಿಸುವ ಮುಖ. ಪ್ರವಿತ್ರರ ಜೀವನವು ಮಾನವಕುಲವು ತಮ್ಮ ಜೀವನದಲ್ಲಿ ಅನುಕರಿಸಲು ಮಾದರಿಯಾಗಬೇಕೆಂದು ಅವರು ಬಯಸಿದರು.
ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಬ್ಯಾಂಕಿನ ಎಲ್ಲಾ ನಿರ್ದೇಶಕರು, ಗ್ರಾಹಕರು ಮತು ಸಿಬ್ಬಂದಿಗಳ ಪರವಾಗಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಭಾವಚಿತ್ರಕ್ಕೆ ಪುಷ್ಪಗುಚ್ಛ ಅರ್ಪಿಸುವ ಮೂಲಕ ಗೌರವ ಸಲ್ಲಿಸಿದರು. ವಂ. ಪೌಸ್ತಿನ್ ಲೋಬೊ ಮತ್ತು ಉಪಾಧ್ಯಕ್ಷ ಶ್ರೀ ಜೆರಾಲ್ಡ್ ಜೂಡ್ ಡಿಸಿಲ್ವಾ ಪುಷ್ಪಗುಚ್ಛ ಅರ್ಪಿಸುವ ಮೂಲಕ ಗೌರವ ಸಲ್ಲಿಸಿದರು.
ಬ್ಯಾಂಕಿನ ಎಲ್ಲಾ ನಿರ್ದೇಶಕರು, ಅಡಳಿತ ಕಛೇರಿ ಮತ್ತು ಸಂಸ್ಥಾಪಕ ಶಾಖೆಯ ಸಿಬ್ಬಂದಿಗಳು ಹಾಜರಿದ್ದರು. ಮಹಾಪ್ರಬಂಧಕ ಶ್ರೀ ಸುನಿಲ್ ಮಿನೆಜಸ್ ವಂದಿಸಿ, ಹಿರಿಯ ಪ್ರಬಂಧಕ ಶ್ರೀ ಡೇರಿಲ್ ಲಸ್ರಾದೊ ನಿರೂಪಿಸಿದರು.