Facebook Twitter Instagram
    Thursday, June 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು- ಆರೋಪಿಗೆ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಪುತ್ತೂರು: ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು- ಆರೋಪಿಗೆ ಜಾಮೀನು ಮಂಜೂರು

    May 15, 2025
    Share

    ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ.  

    ಏ.24 ರಂದು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲೆಂಜಾಲು ಎಂಬಲ್ಲಿ ವಾಸವಿರುವ ವರ್ಗೀಸ್‍ ಥಾಮಸ್ ಎಂಬವರ ಮನೆಯಲ್ಲಿ ವನ್ಯ ಪ್ರಾಣಿಯ ಮಾಂಸದ ತುಂಡುಗಳನ್ನು ದಾಸ್ತಾನಿಟ್ಟಿರುವ ಕುರಿತು ಮಾಹಿತಿ ಬಂದಿದ್ದು, ಪಂಜ ವಲಯದ ಕಡಬ ಅರಣ್ಯಾಧಿಕಾರಿಗಳು ಆರೋಪಿ ಮನೆಗೆ ದಾಳಿ ನಡೆಸಿದಾಗ ಮನೆಯ ರೆಫ್ರಿಜರೇಟರ್ ಒಳಗಡೆ ಹಸಿ ಮಾಂಸ ಪತ್ತೆಯಾಗಿ ಬಳಿಕ ಆರೋಪಿ ಪರಾರಿಯಾಗಿರುವುದಾಗಿ ಆರೂಪಿಸಿ, ತದನಂತರ ಕೃತ್ಯಕ್ಕೆ ಉಪಯೋಗಿಸಿದೆ ಎನ್ನಲಾದ ಕೋವಿ, ವಾಹನವನ್ನು ಮತ್ತು ಹಸಿ ಮಾಂಸವನ್ನು ವಶಕ್ಕೆ ಪಡೆದುಕೊಂಡು, ಆರೋಪಿ ವರ್ಗಿಸ್ ಥಾಮಸ್ ವಿರುದ್ಧ ಭಾರತೀಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರನ್ವಯ ಮೊಕದ್ದಮೆ ದಾಖಲಿಸಿ, ಪುತ್ತೂರು ನ್ಯಾಯಾಲಯಕ್ಕೆ ಅರಣ್ಯ ಅಧಿಕಾರಿಗಳು ವರದಿಯನ್ನು ನೀಡಿದ್ದರು.

    ಪ್ರಕರಣದ ಆರೋಪಿ ವರ್ಗೀಸ್ ಥಾಮಸ್‍ ರವರು, ತಾನು ನಿರಪರಾಧಿ, ಈ ಪ್ರಕರಣಕ್ಕೂ ಮತ್ತು ತನಗೆ ಯಾವುದೇ ಸಂಬಂಧವಿಲ್ಲ. ಆನೆ ಕಾರಿಡಾರ್ ನಿರ್ಮಿಸುವ ವಿಚಾರದಲ್ಲಿ ತನಗೂ ಮತ್ತು ತನ್ನ ರಾಜಕೀಯ ವೈರಿಗಳಿಗೂ ದ್ವೇಷವಿರುವುದರಿಂದ, ಈ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂಬ ವಾದವನ್ನು ಮುಂದಿಟ್ಟು ತನ್ನ ವಕೀಲರ ಮೂಲಕ ರಕ್ಷಣೆಗಾಗಿ ಮಾನ್ಯ ನ್ಯಾಯಾಲಯದ ಮೊರೆ ಹೋಗಿದ್ದರು.

    ಇದೀಗ ಈ ಪ್ರಕರಣದಲ್ಲಿ ದ.ಕ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪುತ್ತೂರು ಪೀಠದ ಗೌರವಾನ್ವಿತ ನ್ಯಾಯಾಧೀಶೆ ಸರಿತಾ ಡಿ ರವರು, ಆರೋಪಿಗೆ ಶರ್ತಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಆರೋಪಿ ಹಿರಿಯ ನ್ಯಾಯವಾದಿಗಳಾದ ನೂರುದ್ದೀನ್ ಸಾಲ್ಮರ ಮತ್ತು ಸಾಕ್ಷಿಕ್ ಆರಿಗಾ ಬಿ.ವಾದಿಸಿದ್ದರು.

    Post Views: 65

    Related Posts

    ಅನಾಮಿಕ ಕರೆ ಮೂಲಕ ಕಣಚೂರು‌ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

    June 4, 2025

    ಮತ್ತೆ ತಾನೇ ದೈವಸ್ಥಾನಕ್ಕೆ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ

    June 4, 2025

    ಕಾರುಗಳಲ್ಲಿ ಟಿಂಟೆಡ್ ಗ್ಲಾಸ್ ನಿಷೇಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ

    June 4, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.