ಮಂಗಳೂರು: ಅಪಾರ್ಟ್ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಇಂದು ಮುಂಜಾನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನ ಕಾರಣದಿಂದಾಗಿ ಅಪಾರ್ಟ್ಮೆಂಟ್ ನ ಎರಡನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಾಡಿಗೆಗೆ ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ.
ಮನೆಯಲ್ಲಿದ್ದ ಸೋಫಾ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳು ಸಂಪೂರ್ಣವಾಗಿದೆ ಸುಟ್ಟು ಭಸ್ಮವಾಗಿದೆ. ಸುಮಾರು ಎಪ್ಪತ್ತೈದು ಸಾವಿರ ರೂ. ನಷ್ಟ ಸಂಭವಿಸಿದೆ ಎಂದು ಹೇಳಬಹುದು.