Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»AIMIT ಕೇಂದ್ರ ಮತ್ತು IBM ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ
    Uncategorized

    AIMIT ಕೇಂದ್ರ ಮತ್ತು IBM ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    June 5, 2025
    Share

    2025ರ ಜುಲೈ 03ರಂದು ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), AIMIT ಕೇಂದ್ರ ಮತ್ತು IBM ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ AIMIT ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, IBM ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, IBMನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್‌ಪಾಥ್‌ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ AIMITನ ಡೀನ್‌ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. ಉಪಸ್ಥಿತರಿದ್ದರು.

    ಈ ಒಡಂಬಡಿಕೆಯು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಿವಿಧ ಆಯಾಮಗಳಲ್ಲಿ ಶೈಕ್ಷಣಿಕ ವಲಯದಲ್ಲಿ ಸ್ಪರ್ಧಾತ್ಮಕ ಸಂಸ್ಥೆಗಳಾಗಿ ಗುರುತಿಸಿಕೊಳ್ಳುವ ಮಹತ್ವದ ಅವಕಾಶವನ್ನು ನೀಡುತ್ತದೆ. ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್‌ಗಳ ಶಿಕ್ಷಣ ಹಾಗೂ ತರಬೇತಿಗಾಗಿ ಉದ್ಯಮ ಮತ್ತು ಶೈಕ್ಷಣಿಕ ವಲಯಗಳಲ್ಲಿ ಆದ್ಯತೆಯ ಸಂಸ್ಥೆಯಾಗಿ ಗುರುತಿಸಿಕೊಳ್ಳುವ ಅವಕಾಶವಿದೆ. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಬೋಧಕರು IBMನ ಶ್ರೇಷ್ಠ ಸಾಫ್ಟ್‌ವೇರ್‌ಗಳ ಬಳಕೆಯ ಮೂಲಕ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು. IBM ಸಾಫ್ಟ್‌ವೇರ್‌ಗಳನ್ನು ಆಧಾರವಾಗಿಟ್ಟುಕೊಂಡು ನವೀನ ಪಠ್ಯಕ್ರಮಗಳನ್ನೂ ಉದ್ಯಮ ಸಂಬಂಧಿತ ವಿಭಿನ್ನ ತಂತ್ರಜ್ಞಾನಗಳನ್ನೂ ವಿನ್ಯಾಸಗೊಳಿಸಲು ಸಾಧ್ಯವಾಗುತ್ತದೆ. ಜೊತೆಗೆ IBM ಅಥವಾ ಅದರ ವ್ಯವಹಾರ ಪಾಲುದಾರ ಸಂಸ್ಥೆಗಳ ಉದ್ಯಮ ತಜ್ಞರಿಂದ ನೈಜ ಅನುಭವದಿಂದ ಕಲಿಯುವ ಅವಕಾಶವೂ ಲಭ್ಯವಾಗುತ್ತದೆ. ಅಂತೆಯೇ, ವಿದ್ಯಾರ್ಥಿಗಳು ಹಾಗೂ ಬೋಧಕರು IBM ಸಾಫ್ಟ್‌ವೇರ್ ಆಧಾರಿತ ವೃತ್ತಿಪರ ಮತ್ತು ಜಾಗತಿಕ ಪ್ರಮಾಣಪತ್ರಗಳನ್ನು ಪಡೆದು ತಮ್ಮ ವೃತ್ತಿ ಜೀವನದಲ್ಲಿ ಮುನ್ನಡೆಯಲು ಈ ಒಡಂಬಡಿಕೆ ನೆರವಾಗಲಿದೆ.

    IBM ಹಾಗೂ ಸೈಂಟ್ ಅಲೋಶಿಯಸ್ ನಿರ್ವಹಣಾ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (AIMIT) IT/ಎಂಬಿಎ ಶಿಕ್ಷಣ ಮತ್ತು ತರಬೇತಿ ಕ್ಷೇತ್ರದಲ್ಲಿ IBM ಸಾಫ್ಟ್‌ವೇರ್ ಕೌಶಲ್ಯದ ಅಗತ್ಯವನ್ನು ಅರಿತಿವೆ. ಈ ಸಹಯೋಗದ ಉದ್ದೇಶ, IBM ಸಾಫ್ಟ್‌ವೇರ್‌ನಲ್ಲಿ ತಜ್ಞರಾಗಿರುವ ಪದವೀಧರರನ್ನು ಹೆಚ್ಚಿಸುವುದು. IBM ಮತ್ತು AIMIT ಎರಡು ಸಂಸ್ಥೆಗಳು ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯಮದ ಕ್ಷೇತ್ರದಲ್ಲಿ ಯಶಸ್ವಿ ಭವಿಷ್ಯ ನಿರ್ಮಿಸಿಕೊಳ್ಳಲು ಸಹಾಯ ಮಾಡುವ ಉದ್ದೇಶಿಸಲಾಗಿದೆ.

    Post Views: 228

    dakshina kannada karnataka mangalore

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.