Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್
    ಇತ್ತೀಚಿನ ಸುದ್ದಿ

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025
    Share

    ಮಂಗಳೂರು : ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ ದಕ್ಷಿಣಕನ್ನಡ ಪೊಲೀಸ್ ಇಲಾಖೆಗೆ ಇದೀಗ ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

    ದಕ್ಷಿಣಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಮಧ್ಯರಾತ್ರಿ ಆಗಮಿಸಿ ಅವರ ಪೋಟೋ ಮತ್ತು ಲೊಕೇಶನ್ ಕುರಿತ ಮಾಹಿತಿ ಕಲೆಹಾಕಿದ್ದಾರೆ. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ದ.ಕ. ಜಿಲ್ಲಾ ಪೊಲೀಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಾಧಿಕಾರವು ದ.ಕ. ಜಿಲ್ಲಾ ಪೊಲೀಸ್ ಇಲಾಖೆಗೆ ಕಾರಣ ಕೇಳಿ ನೋಟಿಸ್‌ ನೀಡಿದೆ.

    ಡಾ.ಅರುಣ್ ಅವರು ಜಿಲ್ಲೆಗೆ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಳೆದ 10 ವರ್ಷಗಳಲ್ಲಿ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಸಮಗ್ರ ಮಾಹಿತಿ ಪಡೆದುಕೊಂಡಿದ್ದು, ಈ ವೇಳೆ ಹತ್ಯೆ ಆರೋಪಿಗಳು ಕೋಮು ಸಂಘಟನೆಗಳ ಜತೆ ಸಂಪರ್ಕಹೊಂದಿರುವುದು ಪತ್ತೆಯಾಗಿತ್ತು. ಇದರ ಆಧಾರದಲ್ಲಿ ಕೋಮು ಸಂಘಟನೆಗಳಿಗೆ ಸೇರಿದ ಪ್ರಮುಖರು, ಕಾರ್ಯಕರ್ತರ ಪಟ್ಟಿ ಸಿದ್ದಪಡಿಸಿ ನಿತ್ಯವೂ ಅವರ ಲೊಕೇಶನ್, ಕಾರ್ಯ ಚಟುವಟಿಕೆಗಳ ಮಾಹಿತಿ ಸಂಗ್ರಹಕ್ಕೆ ನಿರ್ದೇಶನ ನೀಡಿದ್ದರು. ಮಾತ್ರವಲ್ಲದೆ, 36 ಮಂದಿಯ ಗಡೀಪಾರಿಗೆ ದಿಟ್ಟ ನಿರ್ಧಾರ ಕೈಗೊಂಡು ಪ್ರಕ್ರಿಯೆ ಆರಂಭಿಸಿದ್ದರು. ಹಿಂದೂ ಇದು ಸಂಘಟನೆಗಳು ಹಾಗೂ ಬಿಜೆಪಿಯ ಕೆಂಗಣ್ಣಿಗೆ ಕಾರಣವಾಗಿತ್ತು.

    ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರನ್ನು ಗುರಿ ಯಾಗಿಸಿಕೊಂಡು ತೊಂದರೆ ಕೊಡುತ್ತಿದ್ದಾರೆ. ರಾತ್ರಿ ಹೊತ್ತು ಮನೆಗೆ ತೆರಳಿ ಅವರ ನಿವಾಸಗಳ ಫೋಟೋ ತೆಗೆದು, ಜಿಪಿಎಸ್ ಮಾಹಿತಿ ಸಂಗ್ರಹಿಸುತ್ತಿದ್ದಾರೆ, ಕಾನೂನಾತ್ಮಕ ಇಲ್ಲದೆ ಅಥವಾ ಕಾರಣವಿಲ್ಲದೆ ನಡೆಯುತ್ತಿದ್ದು, ಬಾಹಿರವಾಗಿದೆ. ಯಾವುದೇ ವಾರಂಟ್ ನ್ಯಾಯಸಮ್ಮತ ಇದೆಲ್ಲವೂ ಕಾನೂನು ಹಿಂದೂ ಗುರಿ ಸಮುದಾಯದ ಸದಸ್ಯರನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿದ್ದರು. ಅಲ್ಲದೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೂ ಪತ್ರ ಬರೆದಿದ್ದರು.

    Post Views: 320

    hindu leaders karnataka mangalore PoliceAction PoliceInvestigation

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.