Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಉಡುಪಿ ಯುವತಿಯ ಸಾಧನೆ: ಸೀಮಾ ತೆಂಡೂಲ್ಕರ್ ಭಾರತೀಯ ನೌಕಾಪಡೆಯಲ್ಲಿ ಪೈಲಟ್ ಆಗಿ ಆಯ್ಕೆ
    ಕ್ರೈಂ ಸ್ಟೋರಿ

    ಉಡುಪಿ ಯುವತಿಯ ಸಾಧನೆ: ಸೀಮಾ ತೆಂಡೂಲ್ಕರ್ ಭಾರತೀಯ ನೌಕಾಪಡೆಯಲ್ಲಿ ಪೈಲಟ್ ಆಗಿ ಆಯ್ಕೆ

    June 9, 2025
    Share

    ಉಡುಪಿ, ಜೂ. 09 : ಸಾಧಿಸುವ ಛಲವೊಂದಿದ್ದರೆ ಸಾಕು ಯಾವುದೇ ಮಹತ್ವಾಕಾಂಕ್ಷೆಯ ಕನಸುಗಳನ್ನು ನನಸಾಗಿಸಿಕೊಳ್ಳುವುದು ಕಷ್ಟವಲ್ಲ ಎಂಬುದನ್ನು ಉಡುಪಿ ಜಿಲ್ಲೆಯ ಒಂದು ಪುಟ್ಟ ಗ್ರಾಮದ ಯುವತಿಯೊಬ್ಬಳು ಸಾಬೀತುಪಡಿಸಿದ್ದಾರೆ. ಪೆರ್ಣಂಕಿಲ ಎಂಬ ಪುಟ್ಟ ಗ್ರಾಮದ ಸದಾನಂದ ನಾಯಕ್ ಮತ್ತು ಜಯಶ್ರೀ ತೆಂಡೂಲ್ಕರ್ ದಂಪತಿಯ ಪುತ್ರಿ ಸೀಮಾ ತೆಂಡೂಲ್ಕರ್, ಭಾರತೀಯ ನೌಕಾಪಡೆಯಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.

    ಬಾಲ್ಯದಿಂದಲೇ ಸೀಮಾ ಅವರು ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಬೇಕೆಂಬ ಕನಸು ಕಂಡಿದ್ದರು. ಅದನ್ನೇ ಬದುಕಿನ ಗುರಿಯಾಗಿಸಿಕೊಂಡಿದ್ದ ಸೀಮಾ ಅವರು, ತಮ್ಮ ಬಾಲ್ಯದ ಆಕಾಂಕ್ಷೆಯನ್ನು ನನಸಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯಡಕದ ಖಾಸಗಿ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿದ ಅವರು, ನಂತರ ಕಾರ್ಕಳದ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ ಬೆಂಗಳೂರಿನ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಪದವಿ ಪಡೆದರು.ಇಂಜಿನಿಯರಿಂಗ್‌ನಲ್ಲಿ ಪದವಿ ಗಳಿಸಿದರೂ, ಮನಸ್ಸು ಇದ್ದದ್ದು ಭಾರತೀಯ ಸೇನೆ ಕಡೆಗೆ. ಸಶಸ್ತ್ರ ಪಡೆಗಳು ನಡೆಸಿದ ನೇರ ಸಂದರ್ಶನವನ್ನು ಯಶಸ್ವಿಯಾಗಿ ಪೂರೈಸಿದ ಅವರು, ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಆಯ್ಕೆಯಾದರು. ಪ್ರಸ್ತುತ ಅವರು ಕೇರಳದ ಭಾರತೀಯ ನೌಕಾ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

    ಸೀಮಾ ಅವರ ತಂದೆ ಕೃಷಿಕರಾಗಿದ್ದು, ಅವರ ತಾಯಿ ಖಾಸಗಿ ಶಾಲೆಯೊಂದರಲ್ಲಿ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಲೇಜು ದಿನಗಳಲ್ಲಿ ಎನ್‌ಸಿಸಿಯಲ್ಲಿ ತೊಡಗಿಸಿಕೊಂಡ ಸೀಮಾ, 2022ರಲ್ಲಿ ಗಣರಾಜ್ಯೋತ್ಸವ ಪರೇಡ್‌ನ ಗಾರ್ಡ್ ಆಫ್ ಆನರ್ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.”ನನಗೆ ಚಿಕ್ಕಂದಿನಿಂದಲೂ ಭಾರತೀಯ ಸೇನೆಯನ್ನು ಸೇರಬೇಕೆಂಬ ಆಸೆ ಇತ್ತು. ಅದಕ್ಕಾಗಿಯೇ ನಾನು ಎನ್‌ಸಿಸಿಗೆ ಸೇರಿದೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದಾಗ ನನ್ನ ಆಸೆ ಮತ್ತಷ್ಟು ದೊಡ್ಡದಾಯಿತು. ನನ್ನ ಕನಸು ನನಸಾಗಿರುವುದರಿಂದ ನಾನು ಅತ್ಯಂತ ಸಂತೋಷವಾಗಿದ್ದೇನೆ” ಎಂದು ಸೀಮಾ ತೆಂಡೂಲ್ಕರ್ ತಿಳಿಸಿದ್ದಾರೆ

    Post Views: 592

    BreakingBarriers DefenceForces GirlPower IndianNavy InspiringJourney MotivationalStory NavyPilot NCCCadet SeemaTendulkar WomenInUniform

    Related Posts

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.