Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಸಿನಿಮಾ»‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ದುರಂತಗಳ ಸರಮಾಲೆ: ಮೂರನೇ ಕಲಾವಿದ ನಿಧನ
    ಸಿನಿಮಾ

    ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ದುರಂತಗಳ ಸರಮಾಲೆ: ಮೂರನೇ ಕಲಾವಿದ ನಿಧನ

    June 12, 2025
    Share

    ತೀರ್ಥಹಳ್ಳಿ ಜೂನ್ 12: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ ಚಾಪ್ಟರ್ 1 ಸಿನೆಮಾಕ್ಕೆ ವಿಘ್ನಗಳೇ ಹೆಚ್ಚಾಗಿವೆ. ಚಿತ್ರ ಹಲವು ವಿವಾದಗಳಿಂದಾಗಿ ಸುದ್ದಿಯಾಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ ಇಬ್ಬರು ಕಲಾವಿದರು ಈ ಹಿಂದೆ ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

    ಕಾಂತಾರ ಚಾಪ್ಟರ್ 1 ಸಿನಿಮಾ ಕಲಾವಿದ ಹೃದಯಾಘಾತದಿಂದ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು ಅವರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ ಕೆ ಎಂದು ಗುರುತಿಸಲಾಗಿದೆ. ಅವರು ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲು ಆಗುಂಬೆ ಹೋಂ ಸ್ಟೇಯಲ್ಲಿ ಕಳೆದ ರಾತ್ರಿ ತಂಗಿದ್ದ ವೇಳೆ ದುರ್ಘಟನೆ ನಡೆದಿದೆ.

    ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಕೂಡಲೇ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಚಿತ್ರೀಕರಣ ಆರಂಭವಾದ ನಂತರ ಇದು ಮೂರನೇ ಸಾವಾಗಿದೆ.

    ಕಾಮಿಡಿ ಕಿಲಾಡಿಗಳು ಸೀಸನ್‌ 3′ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ‘ಕಾಂತಾರ: ಚಾಪ್ಟರ್ 1′ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದರು. ಮೇ 12 ರಂದು ಮಧ್ಯರಾತ್ರಿ ಹೃದಯಾಘಾತದಿಂದ ರಾಕೇಶ್ ಪೂಜಾರಿ ವಿಧಿವಶರಾದರು. ಚೆನ್ನಾಗಿಯೇ ಓಡಾಡಿಕೊಂಡು, ನಗಾಡಿಕೊಂಡು ಇದ್ದ ರಾಕೇಶ್ ಪೂಜಾರಿ ಹಠಾತ್ ಸಾವನ್ನಪ್ಪಿದರು. ಅದೂ ಜಸ್ಟ್ 34ನೇ ವಯಸ್ಸಿನಲ್ಲಿ ಅನ್ನೋದು ದುರಂತ ಮತ್ತು ದುರಾದೃಷ್ಟಕರ.
    ಈ ಹಿಂದೆ ‘ಕಾಂತಾರ’ ಸಿನಿಮಾ ತಂಡ ಸಾಗುತ್ತಿದ್ದ ಬಸ್ ಕೊಲ್ಲೂರಿನಲ್ಲಿ ಅಪಘಾತಕ್ಕೀಡಾಗಿತ್ತು. ಬಸ್‌ನಲ್ಲಿದ್ದ ಜ್ಯೂನಿಯರ್ ಆರ್ಟಿಸ್ಟ್‌ಗಳು ಗಾಯಗೊಂಡಿದ್ದರು. ಕೆಲ ತಿಂಗಳ ಹಿಂದೆ ‘ಕಾಂತಾರ’ ಸಿನಿಮಾದ ಜ್ಯೂನಿಯರ್ ಆರ್ಟಿಸ್ಟ್ ಕಪಿಲ್‌ ಕೊಲ್ಲೂರು ಬಳಿಯ ಸೌಪರ್ಣಿಕಾ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದರು. ಕಾಂತಾರ ಚಿತ್ರದಲ್ಲಿ ನಟಿಸುತ್ತಿದ್ದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಹಠಾತ್‌ ಸಾವನ್ನಪ್ಪಿದರು. ಕಾಂತಾರ’ ಚಿತ್ರದಲ್ಲಿ ನಟಿಸಲು ಬಂದಿದ್ದ ಮಿಮಿಕ್ರಿ ಕಲಾವಿದ ನಿಜು ವಿ ಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಇದೆಲ್ಲದರ ನಡುವೆ ರಿಷಬ್ ಶೆಟ್ಟಿ ದೈವದ ಮೊರೆ ಹೋಗಿದ್ದರು. ಈ ವೇಳೆ ದೈವವೂ ನಿನಗೆ ದುಶ್ಮನ್​​ಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ. ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ, ನಂಬಿದ ದೈವ ಕೈಬಿಡಲ್ಲ ಎಂದಿತ್ತು.

    Post Views: 428

    culture dakshina kannada leisure lifestyle mangalore

    Related Posts

    ತುಳು ಕ್ರೈಂ ಥ್ರಿಲ್ಲರ್ ‘ಕಟ್ಟೆಮಾರ್’ ಟ್ರೇಲರ್‌ಗೆ ಅದ್ಧೂರಿ ಬಿಡುಗಡೆ: ಜ.23ರಂದು ತೆರೆಗೆ

    January 15, 2026

    ಆಗೋಸ್ಟ್ 29 ರಂದು ‘ನೆತ್ತೆರೆಕೆರೆ’ ತುಳು ಸಿನಿಮಾ ಬಿಡುಗಡೆ

    August 26, 2025

    ಜುಲೈ 11: “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 9, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.