Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ : ಮಧ್ಯವರ್ತಿಯಿಂದ ಲಕ್ಷಾಂತರ ರೂ. ದೋಖಾ
    ಇತ್ತೀಚಿನ ಸುದ್ದಿ

    ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ : ಮಧ್ಯವರ್ತಿಯಿಂದ ಲಕ್ಷಾಂತರ ರೂ. ದೋಖಾ

    July 3, 2025
    Share

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ.

    ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ ವಂಚಿಸಿದ್ದಾರೆ. ಅಷ್ಟೇ ಅಲ್ಲದೆ ಉದ್ದಿಮೆದಾರರಿಂದ ಹಣ ಸಂಗ್ರಹಿಸಿ ಪಾಲಿಕೆಗೆ ಕಟ್ಟದೆ ಕೆಲ ಏಜೆಂಟರು ದೋಖಾ ಮಾಡಿದ್ದಾರೆ. ಸದ್ಯ ಪಾಲಿಕೆಯಿಂದ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

    ಈ ನಕಲಿ ಸರ್ಟಿಫಿಕೇಟ್ ಮೇಲ್ನೋಟಕ್ಕೆ ನೋಡಿದರೆ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಆದರೆ ಕೆಲ‌ ಸರ್ಟಿಫಿಕೇಟ್ನಲ್ಲಿ ಯಾರದ್ದೋ ಕ್ಯೂ ಆರ್ ಕೋಡ್ ಬಳಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿದಾಗ ಬೇರೆ ಉದ್ದಿಮೆದಾರರ ಪರವಾನಗಿ ಪತ್ರ ಲಭ್ಯವಾಗುತ್ತಿದೆ. ಉದ್ದಿಮೆದಾರರು ಇದೇ ಮೂಲ ಪ್ರತಿ ಎಂದು ನಂಬಿದ್ದಾರೆ.

    ಇನ್ನು ಕೆಲ‌ ಸರ್ಟಿಫಿಕೇಟ್ಗಳಲ್ಲಿ ಪರವಾನಗಿ ನವೀಕರಣದ ದಿನಾಂಕಗಳಷ್ಟೇ ಬದಲಾವಣೆ ಮಾಡಲಾಗಿದೆ. ಸುಮಾರು 4,500 ಉದ್ದಿಮೆ ಪರವಾನಗಿಯನ್ನು ನಕಲಿ ಮಾಡಿರುವ ಸಂಶಯ ವ್ಯಕ್ತವಾಗಿದೆ. ಹೀಗಾಗಿ ನಕಲಿ ಸರ್ಟಿಫಿಕೇಟ್ ನೀಡಿ ವಂಚಿಸಿರುವ ಬಗ್ಗೆ ಅನುಮಾನಗಳು ಮೂಡಿದ್ದು, ಸರ್ಟಿಫಿಕೇಟ್ಗಳ ಪರಿಶೀಲನೆಗೆ ಪಾಲಿಕೆ ಆಯುಕ್ತ ರವೀಂದ್ರ ನಾಯಕ್ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.

    ಈ ಕುರಿತಾಗಿ ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ರವೀಂದ್ರ ನಾಯಕ್ ಪ್ರತಿಕ್ರಿಯಿಸಿದ್ದು, ಇಬ್ಬರು ವ್ಯಕ್ತಿಗಳು ಕಚೇರಿಗೆ ಬಂದು ದೂರು ನೀಡಿದ್ದಾರೆ. ಅವರ ಹೆಸರಿನಲ್ಲಿ ಪೃಥ್ವಿರಾಜ್‌ ಶೆಟ್ಟಿ ಎಂಬ ವ್ಯಕ್ತಿ ನಕಲಿ ಸರ್ಟಿಫಿಕೇಟ್ ಸೃಷ್ಟಿಸಿರುವ ಬಗ್ಗೆ ಹೇಳಿದ್ದಾರೆ. ಅವರು ನೀಡಿದ ಹಣ ದುರುಪಯೋಗ ಮಾಡಿ ನಕಲಿ ಸರ್ಟಿಫಿಕೇಟ್ ನೀಡಿದ್ದಾರೆ. ಮೇಲ್ನೋಟಕ್ಕೆ ಪರಿಶೀಲನೆ ಮಾಡಿದಾಗ ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ನಕಲಿ ಮಾಡಿರೋದು ಗೊತ್ತಾಗಿದೆ. ಈ ಬಗ್ಗೆ ನಮ್ಮ ವಲಯ ಆಯುಕ್ತರಿಗೆ ದೂರು ದಾಖಲಿಸಲು ಸೂಚಿಸಲಾಗಿದೆ ಎಂದಿದ್ದಾರೆ.

    ಹೆಚ್ಚಿನ ಉದ್ದಿಮೆ ಪರವಾನಗಿ ತಿದ್ದುಪಡಿಯಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಪರಿಶೀಲನೆ ನಡೆಸಲು ಸಿಬ್ಬಂದಿಗಳಿಗೆ ಸೂಚಿಸಿದ್ದೇನೆ. ಸುಮಾರು ‌4,500 ಉದ್ದಿಮೆ ಪರವಾನಗಿ ನವೀಕರಣ ಆಗಲು ಬಾಕಿ ಇದೆ. ಅದನ್ನ ಪರಿಶೀಲನೆ ಮಾಡಿದರೆ ನಕಲಿ ಆಗಿರುವ ಸಾಧ್ಯತೆ ಗೊತ್ತಾಗುತ್ತೆ. ಉದ್ದಿಮೆದಾರರು ತಮ್ಮ ಪರವಾನಗಿ ಸರ್ಟಿಫಿಕೇಟ್ ಅನ್ನು ಕೂಡಲೇ ಪರಿಶೀಲನೆ ಮಾಡಿ. ಏನೇ ಸಮಸ್ಯೆ ಇದ್ದರೂ ಪಾಲಿಕೆಗೆ ಬಂದು ಅಧಿಕಾರಿಗಳನ್ನು ಭೇಟಿ ಮಾಡಬಹುದು ಎಂದು ಅವರು ತಿಳಿಸಿದರು.

    Post Views: 169

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.