Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ ವಿರುದ್ಧ ಇನ್ನಿಬ್ಬರಿಂದ ದೂರು..!
    ಇತ್ತೀಚಿನ ಸುದ್ದಿ

    ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ ವಿರುದ್ಧ ಇನ್ನಿಬ್ಬರಿಂದ ದೂರು..!

    July 20, 2025
    Share

    ಮಂಗಳೂರು : ಹಲವರಿಗೆ ಕೋಟ್ಯಂತರ ಹಣ ವಂಚಿದ ಆರೋಪಿ ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ರೋಶನ್ ಸಲ್ದಾನ (43) ಎಂಬಾತನಿಂದ ವಂಚನೆಗೊಳಗಾದ ಮಹಾರಾಷ್ಟ್ರ ಮತ್ತು ಅಸ್ಸಾಂನ ಇಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

    ಮಹಾರಾಷ್ಟ್ರದ ಉದ್ಯಮಿಯೊಬ್ಬರು 5 ಕೋಟಿ ರೂ. ಹಣವನ್ನು ಜು.16ರಂದು ಮತ್ತು ಅಸ್ಸಾಂ ರಾಜ್ಯದ ವ್ಯಕ್ತಿಯೊಬ್ಬರು 20 ಲಕ್ಷ ರೂ. ಹಣವನ್ನು ಜು.17 ಬ್ಯಾಂಕ್ ಮೂಲಕ ಆರೋಪಿಯ ಖಾತೆಗೆ ವರ್ಗಾಯಿಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ವಿರುದ್ಧ ಇವರು ನೀಡಿದ ದೂರಿನಂತೆ ಇನ್ನೊಂದು ಎಫ್‌ಐಆರ್ ದಾಖಲಾಗಿದೆ.

    ಮಹಾರಾಷ್ಟ್ರದ ಉದ್ಯಮಿ ಮತ್ತು ಅಸ್ಸಾಂನ ವ್ಯಕ್ತಿ ಹಣ ವರ್ಗಾಯಿಸಿರುವುದನ್ನು ಪೊಲೀಸರು ಬ್ಯಾಂಕ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

    ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯ ಹೆಚ್ಚಿನ ವಿಚಾರಣೆಗೆ ಸೋಮವಾರ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆಸಲಾದ ಮಹತ್ವದ ಕಾರ್ಯಾಚರಣೆಯಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ 200ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ ಆರೋಪದಲ್ಲಿ ರೋಹನ್ ಸಲ್ಡಾನನನ್ನು ಬಂಧಿಸಲಾಗಿತ್ತು. ಇದೀಗ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ.

    ಈತ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾ ಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ ಹೇಳಿ ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಎನ್ನಲಾಗಿದೆ. ಈ ರೀತಿಯಾಗಿ ಆರೋಪಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರು ವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತ ಆರೋಪಿ ಮನೆಯಿಂದ ಪೊಲೀಸರು 667 ಗ್ರಾಂ ಚಿನ್ನಾಭರಣ, 2.75 ಕೋಟಿ ರೂ. ಮೌಲ್ಯದ ವಜ್ರದ ಆಭರಣ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 6,72,947 ಮೌಲ್ಯದ ದೇಶಿ ಮತ್ತು ವಿದೇಶಿ ಮದ್ಯ, ಮಹತ್ವದ ದಾಖಲೆಗಳು ಮತ್ತು ಖಾಲಿ ಚೆಕ್‌ಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 196

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.