Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಪುತ್ತೂರು: ಮೂರು ಪ್ರತ್ಯೇಕ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಗಳ ದಸ್ತಗಿರಿ
    Uncategorized

    ಪುತ್ತೂರು: ಮೂರು ಪ್ರತ್ಯೇಕ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಗಳ ದಸ್ತಗಿರಿ

    August 14, 2025
    Share

    ಪುತ್ತೂರು: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

    ಪುತ್ತೂರು ನಗರ ಠಾಣಾ ಅಕ್ರ 69/2023 ಕಲ: 379 ಐ.ಪಿ.ಸಿ ಪ್ರಕರಣದಲ್ಲಿ 9 ಬಾರಿ ವಾರಂಟ್ ಜಾರಿಯಾಗಿದ್ದರೂ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾವೇರಿ, ಸವಣೂರು ನಿವಾಸಿ ಶಿವಕುಮಾರ್ ಯಾನೆ ಶಿವು ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಪುತ್ತೂರು ಉಪವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡರವರು ಹಾಗೂ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಕಿರಣ್ ಜಾನ್ಸನ್ ಡಿಸೋಜಾ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಠಾಣಾ ಪಿ.ಎಸ್.ಐ ಕೌಶಿಕ್ ರವರ ನೇತೃತ್ವದ, ಸಿಬ್ಬಂದಿಗಳಾದ ಸಿ ಹೆಚ್ ಸಿ 685 ಪ್ರಶಾಂತ ರೈ, ಸಿಹೆಚ್ ಸಿ 1028 ಗಣೇಶ ಎನ್, ಸಿಪಿಸಿ 2283 ಶ್ರೀಶೈಲ ಎಂ.ಕೆ, ಸಿಪಿಸಿ 2404 ಮಹಮ್ಮದ್ ಮೌಲಾನಾ ಅವರುಗಳನ್ನು ಒಳಗೊಂಡ ವಿಶೇಷ ತಂಡವು ಆಗಸ್ಟ್ 12ರಂದು ಬೆಂಗಳೂರಿನ ಅಬ್ಜಿಗೆರೆ ಎಂಬಲ್ಲಿ ದಸ್ತಗಿರಿ ಮಾಡಿರುತ್ತಾರೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 14/2022, ಕಲಂ:394 ಐ.ಪಿ.ಸಿ. ಪ್ರಕರಣದಲ್ಲಿ ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಬೆಂಗಳೂರು, ಜಗಜೀವನ್ ರಾಮ್ ನಗರ ನಿವಾಸಿ ಸಯ್ಯದ್ ಕಲೀಂ ಯಾನೆ ಕಲ್ಲು ಮಾಮು ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ಹಾಗೂ ಪೊಲೀಸ್ ಉಪನಿರೀಕ್ಷರಾದ ಕೌಶಿಕ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಠಾಣಾ CHC -826 ಶಿವರಾಮ ರೈ ಮತ್ತು ಡಿವೈಎಸ್‌ಪಿ ವಿಶೇಷ ತಂಡದ ಸಿಬ್ಬಂದಿಗಳಾದ CPC 2384 ಶಾಂತಕುಮಾರ್, CPC 1035  ರವಿಕುಮಾರ್, CPC 1926  ರಮೇಶ್ ರವರುಗಳನ್ನು ಒಳಗೊಂಡ ತಂಡವು ದಸ್ತಗಿರಿ ಮಾಡಿರುತ್ತಾರೆ.ಸದ್ರಿ ಆರೋಪಿಯ ವಿರುದ್ಧ ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ 4 ಪ್ರಕರಣಗಳು ದಾಖಲಾಗಿರುತ್ತದೆ.ಕಡಬ ಪೊಲೀಸ್ ಠಾಣಾ ಅ ಕ್ರ: 91/2019 ಕಲಂ: 341, 323, 324, 504, 506 R/w 34 IPC ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ, ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಡಬ ರಾಮಕುಂಜ ನಿವಾಸಿ ಯೂಸೂಫ್ (32) ಎಂಬಾತನನ್ನು ಕಡಬ ಠಾಣಾ ಪೊಲೀಸರು ಆ.12 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

    Post Views: 135

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.