Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮನೆ ಕಳ್ಳತನ ಪ್ರಕರಣದ ಆರೋಪಿ ಹಾಗೂ ಸೊತ್ತುಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಪುತ್ತೂರು: ಮನೆ ಕಳ್ಳತನ ಪ್ರಕರಣದ ಆರೋಪಿ ಹಾಗೂ ಸೊತ್ತುಗಳು ವಶಕ್ಕೆ

    August 18, 2025
    Share

    ಪುತ್ತೂರು: ಆ.12ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳದ ಮನೆಯೊಂದರಲ್ಲಿ ನಡೆದ, ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯನ್ನು ಈಶ್ವರಮಂಗಲದಲ್ಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29) ಎಂದು ಗುರುತಿಸಲಾಗಿದೆ.

    ಊರಿನಲ್ಲಿ ತಾನಾಯಿತು ತನ್ನ ಕೆಲಸವಾಯಿತು ಯಾರ ತಂಟೆ ತಕರಾರಿಗೆ ಹೋಗದ ಕೆಂಪು ಕಲ್ಲು ಲೋಡಿಂಗ್ ನ್ನು ತನ್ನ ಕಾಯಕವಾಗಿ ನಂಬಿದ್ದ ದಯಾನಂದ ಕೆಲವು ಸಮಯದಿಂದ ಕೆಂಪು ಕಲ್ಲು ಕೆಲಸ ಇಲ್ಲದ ಕಾರಣ ತನ್ನ ಮನೆ ಖರ್ಚು, ಬ್ಯಾಂಕ್ ಲೋನ್ ಕಟ್ಟಲು ಸಾಧ್ಯವಾಗದೆ ಬೇರೆ ವಿದಿಯಿಲ್ಲದೆ ಕಳ್ಳತನ ಮಾಡಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಆರೋಪಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರಕರಣದ ಆರೋಪಿ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕರಾದ ರವಿ ಬಿ ಎಸ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್ ರವರ ನೇತೃತ್ವದ, ಎಎಸ್‌ಐ ಚಂದ್ರಶೇಖರ್, ಹೆಚ್.ಸಿ 1”ಪ್ರವೀಣ್, ಹೆಚ್.ಸಿ ಮಧು, ಹೆಚ್.ಸಿ ಹರೀಶ್, ಹೆಚ್.ಸಿ ಸುಬ್ರಹ್ಮಣ್ಯ, ಪಿಸಿ ಆಕಾಶ್, ಪಿಸಿ ಯುವರಾಜ್, ಪಿಸಿ ಶರಣಪ್ಪ ಪಾಟೀಲ್‌, ಚಾಲಕರಾದ ಎಆರ್ ಎಸ್ ಐ ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್‌ರವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿತ್ತು.

    Post Views: 117

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.