Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿವೃತ್ತಿಗೆ 3 ದಿನ ಬಾಕಿ ಇರುವಾಗಲೇ ಐಪಿಎಸ್ ಅಧಿಕಾರಿ ಮಹಿಪಾಲ್ ನಿಧನ
    ಇತ್ತೀಚಿನ ಸುದ್ದಿ

    ನಿವೃತ್ತಿಗೆ 3 ದಿನ ಬಾಕಿ ಇರುವಾಗಲೇ ಐಪಿಎಸ್ ಅಧಿಕಾರಿ ಮಹಿಪಾಲ್ ನಿಧನ

    August 28, 2025
    Share

    ನಿವೃತ್ತಿಗೆ ಮೂರು ದಿನ ಬಾಕಿ ಇರುವಾಗಲೇ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.  1997ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮಹಿಪಾಲ್ ಯಾದವ್ ಮೃತಪಟ್ಟ ದುರ್ದೈವಿ.

    ಆಗಸ್ಟ್ 30ರಂದು ಕೇರಳ ರಾಜ್ಯ ಸರಕಾರವು ಆನ್‌ಲೈನ್ ನಲ್ಲಿ ಅಧಿಕೃತ ವಿದಾಯ ಕಾರ್ಯಕ್ರಮ ಏರ್ಪಡಿಸುವುದಕ್ಕೂ ಮುನ್ನವೇ ಮಹಿಪಾಲ್ ಯಾದವ್ ನಿಧನರಾಗಿದ್ದಾರೆ. ಅವರು ರಾಜಸ್ಥಾನದ ಜೈಪುರದಲ್ಲಿ ನಿಧನರಾಗಿದ್ದು, ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ವಿಷಮಿಸಿದ್ದರಿಂದ, ಅವರ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ದಿದ್ದರು. 

    ತಮ್ಮ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದ ಮಹಿಪಾಲ್ ಯಾದವ್, ಕೇರಳ ಅಬಕಾರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅವರು ವೈದ್ಯಕೀಯ ರಜೆಯ ಮೇಲೆ ಕರ್ತವ್ಯದಿಂದ ತೆರಳುವುದಕ್ಕೂ ಮುನ್ನ, ಅವರನ್ನು ಇತ್ತೀಚೆಗಷ್ಟೇ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿತ್ತು.   ರಾಜಸ್ಥಾನದ ಅಲ್ವಾರ್ ನ ನಿವಾಸಿಯಾದ ಮಹಿಪಾಲ್ ಯಾದವ್, ನಿಯೋಜನೆಯ ಮೇಲೆ ಗಡಿ ಭದ್ರತಾ ಪಡೆ ಹಾಗೂ ಕೇಂದ್ರೀಯ ತನಿಖಾ ತಂಡ (CBI) ಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಅವರು ಸಿಬಿಐನಲ್ಲಿದ್ದಾಗ, ಅತಿ ಗಣ್ಯ ವ್ಯಕ್ತಿಗಳ ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣ ಹಾಗೂ ಮುಲಾಯಂ ಸಿಂಗ್ ಯಾದವ್ ಅವರ ಆಸ್ತಿ ತನಿಖೆ ಪ್ರಕರಣಗಳ ತಂಡದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. 2018ರಲ್ಲಿ ಅವರು ಜಲಂಧರ್ ನ ಬಿಎಸ್ಎಫ್ ಪಂಜಾಬ್ ಫ್ರಾಂಟಿಯರ್ ನ ಪೊಲೀಸ್ ಮುಖ್ಯಿಸ್ಥರಾಗಿ ಕಾರ್ಯನಿರ್ವಹಿಸಿದ್ದರು. 2023ರಲ್ಲಿ ಮತ್ತೆ ಮಾತೃ ಕೇಡರ್ ಗೆ ಮರಳಿದ್ದ ಮಹಿಪಾಲ್ ಯಾದವ್, ಕೇರಳ ಅಬಕಾರಿ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಕೇರಳದಲ್ಲಿ ಅವರು ಕೊಚ್ಚಿ ನಗರ ಪೊಲೀಸ್ ಆಯುಕ್ತ, ಆಂತರಿಕ ಭದ್ರತೆಗೆ ಪೊಲೀಸ್ ಮಹಾ ನಿರೀಕ್ಷಕ ಹಾಗೂ ತಿರುವನಂತಪುರಂ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.

    Post Views: 136

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.