Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅತ್ಯಾಚಾರ ಸಂತ್ರಸ್ತೆಯ ಶಿಶು ಮಾರಾಟ ಪ್ರಕರಣ: ಬಿ.ಸಿ.ರೋಡ್ ಮೂಲದ ವೈದ್ಯ ಸೋಮೇಶ್ ಸೊಲೊಮನ್,ಸೇರಿ ಮೂವರ ಬಂಧನ
    ಇತ್ತೀಚಿನ ಸುದ್ದಿ

    ಅತ್ಯಾಚಾರ ಸಂತ್ರಸ್ತೆಯ ಶಿಶು ಮಾರಾಟ ಪ್ರಕರಣ: ಬಿ.ಸಿ.ರೋಡ್ ಮೂಲದ ವೈದ್ಯ ಸೋಮೇಶ್ ಸೊಲೊಮನ್,ಸೇರಿ ಮೂವರ ಬಂಧನ

    September 4, 2025
    Share

    ಮಂಗಳೂರು: ಅತ್ಯಾಚಾರ ಸಂತ್ರಸ್ಥೆಯ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಡಾಕ್ಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

    ಬಿಸಿ ರೋಡ್‌ನ‌ ವೈದ್ಯ ಡಾ| ಸೋಮೇಶ್‌ ಸೊಲೊಮನ್‌, ಮಂಗಳೂರಿನ ಪಿಜಿ ಮಾಲಕಿ ವಿಜಯಲಕ್ಷ್ಮಿ ಆಲಿಯಾಸ್‌ ವಿಜಯ ಮತ್ತು ಅತ್ಯಾಚಾರ ಆರೋಪಿ ನವನೀತ್‌ ನಾರಾಯಣ ಬಂಧಿತರು.

    ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಗೆ ಇದು ಇವರ ಮಗುವಲ್ಲ ಎಂದು ತಿಳಿದು ಬಂದಿದೆ. ಅವರದಲ್ಲದ ಮಗುವಿನ ಬಗ್ಗೆ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಅವಿವಾಹಿತ ಮಹಿಳೆಗೆ ಹೆರಿಗೆಯಾಗಿದ್ದು, ಹಣ ನೀಡಿ ಆಸ್ಪತ್ರೆಯ ಮೂಲಕ ಮಗುವನ್ನು ಪಡೆದುಕೊಂಡು ಬಂದಿರುವುದಾಗಿ ದಂಪತಿ ಅಂಗನವಾಡಿ ಕಾರ್ಯಕರ್ತೆಗೆ ಮಾಹಿತಿ ನೀಡಿದ್ದಾರೆ . ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಶಿರ್ವ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಶಿರ್ವಪೊಲೀಸರು ಪ್ರಭಾವತಿಯವರ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ ಹೆಣ್ಣು ಮಗು ಆಗಸ್ಟ್ 3 ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಜನಿಸಿದ್ದು, ಮಂಗಳೂರಿನ ಕೊಲಾಸೊ ಆಸ್ಪತ್ರೆಯ ವೈದ್ಯರಿಗೆ ₹4.5 ಲಕ್ಷ ಹಣ ನೀಡಿ ಶಿಶು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಮಾನಸಿಕ ಆಸ್ವಸ್ಥೆಯಾಗಿದ್ದ ಮಗುವಿನ ತಾಯಿ ಅತ್ಯಾಚಾರಕ್ಕೆ ಒಳಗಾಗಿದ್ದು, ಆಕೆಯ ಪರಿಚಯದ ನವನೀತ್‌ ನಾರಾಯಣ ಅತ್ಯಾಚಾರ ನಡೆಸಿದ್ದು ಪೊಲೀಸ್‌ ತನಿಖೆಯಿಂದ ತಿಳಿದು ಬಂದಿದೆ.

    ಈ ಪ್ರಕರಣದಲ್ಲಿ ಒಳಗೊಂಡ ಆಪಾದಿತರಾದ ಬಿ ಸಿ ರೋಡ್‌ನ‌ ವೈದ್ಯ ಡಾ. ಸೋಮೇಶ್‌ ಸೊಲೊಮನ್‌, ವಿಜಯಲಕ್ಷ್ಮೀ ಅಲಿಯಾಸ್‌ ವಿಜಯ ಮತ್ತು ನವನೀತ್‌ ನಾರಾಯಣ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಕಾರ್ಕಳ ಡಿವೈಎಸ್‌ಪಿ ಡಾ. ಹರ್ಷಾ ಪ್ರಿಯಂವದಾ ಅವರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 175

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.