Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

    September 14, 2025
    Share


    ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 12 ನೇ ಎಟಿಎಂ ಅನ್ನು ಸೆಪ್ಟೆಂಬರ್ 13, 2025 ರ ಶನಿವಾರ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟಿಸಿತು.
    ಈ ಎಟಿಎಂ ಅನ್ನು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಬ್ರ‍್ಯಾಂಡಿAಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ಸ್ನ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿAದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಪೌಲ್ ಸಿಕ್ವೇರಾ ಮಾಡಿದರು.
    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಎನ್‌ಅರ್‌ಐ, ಕಥೋಲಿಕ್ ಸಭಾ ಕಿನ್ನಿಗೋಳಿಯ ಕಾರ್ಯದರ್ಶಿ ಹಾಗೂ ವಿನ್ಸೆಂಟ್ ಡಿ ಪಾಲ್ ಲೆಕ್ಕಪರಿಶೋಧಕ ಶ್ರೀ ಜೆರೋಮ್ ಡಿ’ಅಲ್ಮೇಡಾ ಮತ್ತು ಕಿನ್ನಿಗೋಳಿಯ ಮೆಸ್ಸರ್ಸ್ ಚೈತನ್ಯ ಮೆಡಿಕಲ್ಸ್ ಮತ್ತು ಸಾಗರಿಕಾ ಅರೇಂಜರ್ಸ್ನ ಮಾಲೀಕ ಶ್ರೀ ಧನಂಜಯ ಪಿ. ಶೆಟ್ಟಿಗಾರ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಜನರಲ್ ಮ್ಯಾನೇಜರ್ ಶ್ರೀ ಸುನಿಲ್ ಮಿನೇಜಸ್ ಮತ್ತು ಶಾಖಾ ವ್ಯವಸ್ಥಾಪಕ ಶ್ರೀ ಅನಿಲ್ ಆರ್. ಡಿ’ಸೋಜಾ ಹಾಜರಿದ್ದರು.


    ಸಮಾರಂಭದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಕಳೆದ 28 ವರ್ಷಗಳಲ್ಲಿ ಶಾಖೆಯ ಬೆಳವಣಿಗೆಗೆ ನಿರಂತರ ಬೆಂಬಲ ನೀಡಿದ ಕಿನ್ನಿಗೋಳಿ ಶಾಖೆಯ ಗ್ರಾಹಕರಿಗೆ ಅವರು ಧನ್ಯವಾದ ಅರ್ಪಿಸಿದರು. ಕಳೆದ ಏಳು ವರ್ಷಗಳಲ್ಲಿ ಬ್ಯಾಂಕಿನ ಗಮನಾರ್ಹ ಪ್ರಗತಿಯನ್ನು ತಿಳಿಸಿ ಈ ಅವಧಿಯಲ್ಲಿ ಬ್ಯಾಂಕಿನ ವಹಿವಾಟು ₹ 500 ಕೋಟಿಯಿಂದ ₹ 1300 ಕೋಟಿಗೆ ಏರಿದೆ. ಸಂತೆಕಟ್ಟೆ, ದೇರಳಕಟ್ಟೆ ಮತ್ತು ಇತರ ಸ್ಥಳಗಳಲ್ಲಿ ಹೊಸ ಶಾಖೆಗಳನ್ನು ತೆರೆಯುವುದು ಸೇರಿದಂತೆ ಬ್ಯಾಂಕಿನ ಮುಂದಿನ ಯೋಜನೆಗಳನ್ನು ಅವರು ಹಂಚಿ‌ಕೊಂಡರು. ಗ್ರಾಹಕರು ತಮ್ಮ ನಿರಂತರ ಬೆಂಬಲ ಮತ್ತು ಸಹಕಾರವನ್ನು ನೀಡಬೇಕೆಂದು ಅವರು ಒತ್ತಾಯಿಸಿದರು.


    ಶಿಕ್ಷಣ, ಕ್ರೀಡೆ ಮತ್ತು ಕಲೆಗಳಂತಹ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಗೌರವಿಸುವ ಸಂಪ್ರದಾಯವನ್ನು ಎಂಸಿಸಿ ಬ್ಯಾಂಕ್ ಆರಂಭಿಸಿದೆ ಎಂದು ಹೇಳಿ, ನಿರ್ದೇಶಕರು, ಸಿಬ್ಬಂದಿ, ಗ್ರಾಹಕರು ಮತ್ತು ಸಮುದಾಯದ ಸದಸ್ಯರಿಗೆ ಅವರ ಅಚಲ ಬೆಂಬಲಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ರಾಜಿ ಇಲ್ಲದೆ ಉತ್ತಮ ಗುಣಮಟ್ಟದ ಸೇವೆಗಳನ್ನು ನೀಡಲು ಎಂಸಿಸಿ ಬ್ಯಾಂಕ್ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು.


    ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಮತನಾಡಿ, ಕಿನ್ನಿಗೋಳಿ ಶಾಖೆಯಲ್ಲಿ ತನ್ನ 12 ನೇ ಎಟಿಎಂ ಉದ್ಘಾಟಿಸಿದ ಬ್ಯಾಂಕಿಗೆ ಅಭಿನಂದಿಸಿದರು. 1996ರಿಂದ ಎಂಸಿಸಿ ಬ್ಯಾಂಕಿನ ಗ್ರಾಹಕರಾಗಿರುವ ಅವರು, ಬ್ಯಾಂಕಿನೊAದಿಗಿನ ತಮ್ಮ ದೀರ್ಘ ಸಂಬಂಧವನ್ನು ನೆನಪಿಸಿಕೊಂಡರು ಮತ್ತು ಶಾಖೆಯ ಅತ್ಯುತ್ತಮ ಗ್ರಾಹಕ ಸೇವೆಯನ್ನು ಶ್ಲಾಘಿಸಿದರು. ಮೌಲ್ಯಾಧಾರಿತ ಮತ್ತು ಫಲಿತಾಂಶ-ಆಧಾರಿತ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸಲು ಅವರು ಬ್ಯಾಂಕಿಗೆ ಸೂಚಿಸಿ ಗ್ರಾಹಕರೊಂದಿಗೆ ಬಲವಾದ, ಸ್ನೇಹಪರ ಸಂಬAಧಗಳನ್ನು ನಿರ್ಮಿಸುವ ಮಹತ್ವವನ್ನು ಹೇಳಿದರು. ಎಂಸಿಸಿ ಬ್ಯಾಂಕ್ ಕರ್ನಾಟಕದಾದ್ಯಂತ ಮತ್ತು ಅಂತಿಮವಾಗಿ ದೇಶಾದ್ಯಂತ ವಿಸ್ತರಿಸುತ್ತದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.


    ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ, ಕಿನ್ನಿಗೋಳಿಯಲ್ಲಿ ನಡೆದ ಎಟಿಎಂ ಉದ್ಘಾಟನೆಯಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಕ್ಕಾಗಿ ಬ್ಯಾಂಕಿಗೆ ಧನ್ಯವಾದ ಅರ್ಪಿಸಿದರು. ಅವರು ಎಂಸಿಸಿ ಬ್ಯಾಂಕಿನ ವೃತ್ತಿಪರತೆಯನ್ನು ಶ್ಲಾಘಿಸಿ ತಮ್ಮ ಬೆಂಬಲವನ್ನು ಘೋಷಿಸಿದರು. ಇಂದಿನ ಅತ್ಯಂತ ಸ್ಪರ್ಧಾತ್ಮಕ ವಾತಾವರಣದಲ್ಲಿ, ಬೆಳವಣಿಗೆ ಸವಾಲಿನದ್ದಾಗಿದ್ದರೂ ಎಂಸಿಸಿ ಬ್ಯಾಂಕಿನ ಬಲವಾದ ಹಣಕಾಸು ನಿರ್ವಹಣೆಯ ದೃಷ್ಟಿಕೋನ ಮತ್ತು ಆ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಅದರ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯ ಸಮರ್ಪಣೆಯನ್ನು ಶ್ಲಾಘಿಸಿದರು.


    ರೆವರೆಂಡ್ ಫಾದರ್ ಪಾಲ್ ಸಿಕ್ವೇರಾ ಮತನಾಡಿ ಬ್ಯಾಂಕಿನ ಅಧ್ಯಕ್ಷ ಶ್ರೀ ಅನಿಲ್ ಲೋಬೊ ಅವರ ಕ್ರಿಯಾತ್ಮಕ ನಾಯಕತ್ವವನ್ನು ಶ್ಲಾಘಿಸಿದರು ಮತ್ತು ಬ್ಯಾಂಕಿನ ನಿರಂತರ ಯಶಸ್ಸಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.
    ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಸಿಎ ಪೂರ್ಣಗೊಳಿಸಿದ ನಿಕಿತಾ ರಿಯೋನಾ ಡಿ’ಸೋಜಾ, ಡಾ| ಮೆಲಿಶಾ ರೊಡ್ರಿಗಸ್ (ನೀಟ್ ಪಿಜಿ 163ನೇ ರ‍್ಯಾಂಕ್) ಮತ್ತು ಶ್ರೀ ಶೋನ್ ಸಿಕ್ವೇರಾ (ಕರಾಟೆ ಚಾಂಪಿಯನ್) ಅವರನ್ನು ಅವರ ಅತ್ಯುತ್ತಮ ಸಾಧನೆಗಳಿಗಾಗಿ ಸನ್ಮಾನಿಸಲಾಯಿತು.
    ಆಚರಣೆಯ ಭಾಗವಾಗಿ, ಸೆಪ್ಟೆಂಬರ್ 13 ರಂದು ಹುಟ್ಟುಹಬ್ಬ ಆಚರಿಸಿಕೊಂಡ ಗ್ರಾಹಕರನ್ನು ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಸನ್ಮಾನಿಸಲಾಯಿತು ಮತ್ತು ಸೆಪ್ಟೆಂಬರ್ 19ರಂದು ತಮ್ಮ 75 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಶ್ರೀ ಡೇನಿಯಲ್ ಡಿಸೋಜಾ ಅವರನ್ನು ಸಹ ಸನ್ಮಾನಿಸಲಾಯಿತು.


    ನಿರ್ದೇಶಕಿ ಡಾ| ಫ್ರೀಡಾ ಫ್ಲಾÃವಿಯಾ ಡಿ’ಸೋಜಾ ಸ್ವಾಗತಿಸಿದರು. ಅನ್ಸಿಲ್ಲಾ ಫೆರ್ನಾಂಡಿಸ್ ಮತ್ತು ಡೇಲ್ ಡಿ’ಸೋಜಾ ಅವರ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
    ನಿರ್ದೇಶಕರಾದ ಶ್ರೀ ಆಂಡ್ರ್ಯೂ ಡಿಸೋಜ, ಶ್ರೀ ಮೆಲ್ವಿನ್ ವಾಸ್, ಶ್ರೀ ಡೆವಿಡ್ ಡಿಸೋಜ, ಉಪ ಪ್ರಧಾನ ವ್ಯವಸ್ಥಾಪಕ ಶ್ರೀ ರಾಜ್ ಮೆನೆಜಸ್, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ಸದಸ್ಯರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿದ್ದರು. ಶ್ರೀಮತಿ ಲವಿಟಾ ಡಿಸೋಜ, ಮುಲ್ಕಿ ನಿರೂಪಿಸಿ ವಂದಿಸಿದರು.

    Post Views: 141

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.