Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ ವತಿಯಿಂದ ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ
    ಇತ್ತೀಚಿನ ಸುದ್ದಿ

    ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ ವತಿಯಿಂದ ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

    September 18, 2025
    Share

    ಮಂಗಳೂರು: ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಲಯನ್ ರಾಜೇಶ್ ಶೆಟ್ಟಿ ಶಬರಿ ತಿಳಿಸಿದರು. ಅವರು ನಗರದ ಲಯನ್ ಅಶೋಕದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿಸಲಿದ್ದು, ಸೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ನಗದು ಸಹಿತ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಪ್ರಧಾನ ಅತಿಥಿಗಳಾಗಿ ಖ್ಯಾತ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರ ಭಾಗವಹಿಸಲಿದ್ದಾರೆ.

     ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ವೇದಮೂರ್ತಿ ಹರಿನಾರಾಯಣ ಅಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಲಯನ್ಸ್ ಜಿಲ್ಲೆ 317 ಡಿ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಹುಮಾನ ವಿತರಿಸಲಿದ್ದಾರೆ.

    ಗೌರವ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಿ ವೇದವ್ಯಾಸ ಕಾಮತ್ ಭಾಗವಹಿಸಲಿದ್ದು, ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯ ಪ್ರಧಾನ ಸಂಯೋಜಕರಾದ ಕೆ ರಾಜೇಶ್ ಶೆಟ್ಟಿ ಶಬರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಲಯನ್ಸ್ ಜಿಲ್ಲೆ 317 ಡಿ ನಿಕಟಪೂರ್ವ ಜಿಲ್ಲಾ ಗವರ್ನರ್ ಬಿ ಎಂ ಭಾರತಿ, ಲಯನ್ಸ್ ಜಿಲ್ಲೆ 317 ಡಿ ಪ್ರಥಮ ಉಪ ಜಿಲ್ಲಾ ಗವರ್ನರ್ ಎಚ್ ಎಂ ತಾರಾನಾಥ್, ದ್ವಿತೀಯ ಉಪ ಜಿಲ್ಲಾ ಗವರ್ನರ್ ಕೆ ಗೋವರ್ಧನ್ ಶೆಟ್ಟಿ ಶುಭಾಶಂಸನೆಗೈಯಲಿದ್ದಾರೆ ಎಂದರು. 

    ಸಮಾರಂಭದಲ್ಲಿ ಎಚ್ ಆರ್ ಚಂದ್ರೇಗೌಡ, ಎಂ ಬಾಲಕೃಷ್ಣ ಹೆಗ್ಡೆ, ನ್ಯಾನ್ಸಿ ಮಸ್ಕರೇನಸ್, ಜ್ಯೋತಿ ಎಸ್ ಶೆಟ್ಟಿ, ಎ ಎನ್ ಸುದರ್ಶನ್ ಪಡಿಯಾರ್, ಮೋಹನ ಕೊಪ್ಪಲ, ಕಿಶೋ‌ರ್ ಡಿ ಶೆಟ್ಟಿ, ಶ್ರೀನಿಧಿ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಉಮೇಶ್ ಅಧಿಕಾರಿ, ಹರೀಶ್ ಉಜ್ಜೋಡು, ಜ್ಯೋತಿ ಎಸ್ ಶೆಟ್ಟಿ, ಗೋವರ್ದನ್ ಶೆಟ್ಟಿ ಮತ್ತು ಎ ಎನ್ ಸುದರ್ಶನ್ ಪಡಿಯಾರ್ ಉಪಸ್ಥಿತರಿದ್ದರು.

    Post Views: 190

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.