Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವೆನ್ಲಾಕ್‌ನಲ್ಲಿ ಕರುಣೆಯ ತೊಟ್ಟಿಲು ಉದ್ಘಾಟನೆ
    ಇತ್ತೀಚಿನ ಸುದ್ದಿ

    ಮಂಗಳೂರು: ವೆನ್ಲಾಕ್‌ನಲ್ಲಿ ಕರುಣೆಯ ತೊಟ್ಟಿಲು ಉದ್ಘಾಟನೆ

    September 21, 2025
    Share

    ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಶುಭ ಹಾರೈಸಿದರು.

    ಎಂಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಚೈರ್‌ಮ್ಯಾನ್ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು ಟ್ರಸ್ಟಿಗಳ ಸಹಾಯದಿಂದ ನಡೆಯುವ ‘ಕಾರುಣ್ಯ ಯೋಜನೆ’ಯನ್ನು ನ.1ರಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೂ ವಿಸ್ತರಿಸಲಾಗುತ್ತಿದೆ ಎಂದರು.

    ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸ ಕಲ್ಪನೆಯಾಗಿ ಕ್ಲೋತ್ ಬ್ಯಾಂಕ್ ಆರಂಭಿಸಲಾಗಿದೆ. ಸಾರ್ವಜನಿಕರು ಹೊಸದಾಗಿ ಖರೀದಿಸಿದ ಅಥವಾ ಬಳಕೆ ಮಾಡಿದ ಶುಭ್ರ ಬಟ್ಟೆಗಳನ್ನು ಇಲ್ಲಿ ತಂದು ಇಡಬಹುದು. ಇದನ್ನು ಅಗತ್ಯವಿರುವ ರೋಗಿಗಳು ಅಥವಾ ಅವರ ಜತೆಗಾರರು ಕೊಂಡೊಯ್ಯಲಿದ್ದಾರೆ ಎಂದು ಅವರು ಹೇಳಿದರು.

    ಎಂಫ್ರೆಂಡ್ಸ್ ಸ್ಥಾಪಕ ರಶೀದ್ ವಿಟ್ಲ ಮಾತನಾಡಿ, ವೆನ್ಲಾಕ್ ಆಸ್ಪತ್ರೆಯ ಡಿಎಂಒ ಅವರ ಮನವಿ ಮೇರೆಗೆ ಕ್ಲೋತ್ ಬ್ಯಾಂಕ್ ಆರಂಭಿಸಿದ್ದು, ಅದರ ಖರ್ಚು ವೆಚ್ಚವನ್ನು ನಮ್ಮ ಟ್ರಸ್ಟಿ ಶರೀಫ್ ವೈಟ್‌ಸ್ಟೋನ್ ಭರಿಸಿದ್ದಾರೆ. ಜನರು ಉತ್ತಮ ದರ್ಜೆಯ ಬಟ್ಟೆ ತಂದು ಕೊಟ್ಟು ಸಹಕರಿಸಬೇಕು. ಇಲ್ಲಿಯ ಸಿಬ್ಬಂದಿ ಅಗತ್ಯವಿರುವವರಿಗೆ ವಿತರಿಸಲಿಸಲಿದ್ದಾರೆ ಎಂದರು.

    ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವೆನ್‌ಲಾಕ್ ಆಸ್ಪತ್ರೆ ಅಧೀಕ್ಷಕ ಡಾ.ಡಿ.ಎಸ್. ಶಿವಪ್ರಕಾಶ್, ಆರ್‌ಎಂಒ ಡಾ.ಸುಧಾಕರ್, ಕೆಎಂಸಿ ಆಸ್ಪತ್ರೆ ಡೀನ್ ಡಾ.ಉನ್ನಿಕೃಷ್ಣನ್, ಜಿಪಂ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ., ಮಾಜಿ ಕಾರ್ಪೊರೇಟರ್ ಎ.ಸಿ.ವಿನಯರಾಜ್, ಎಂಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಟ್ರಸ್ಟಿಗಳಾದ ಮೊಹಮ್ಮದ್ ಹನೀಫ್ ಗೋಳ್ತಮಜಲು, ಅಬೂಬಕರ್ ಕೆ., ಅಬೂಬಕರ್ ಪುತ್ತು, ಅನ್ವರ್ ಹುಸೇನ್, ಇಬ್ರಾಹಿಂ ಮೊಯ್ದಿನಬ್ಬ ನಂದಾವರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಸಲೀಂ ಮಕ್ಕಾ, ಡಿ.ಎಂ.ರಶೀದ್ ಮತ್ತಿತರರು ಉಪಸ್ಥಿತರಿದ್ದರು.

    Post Views: 192

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.