Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್‌ ಮಧ್ಯಂತರ ತಡೆ- ವಿಚಾರಣೆ  ಆ.8 ಕ್ಕೆ ಮುಂದೂಡಿದ ಕೋರ್ಟ್
    ಇತ್ತೀಚಿನ ಸುದ್ದಿ

    ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್‌ ಮಧ್ಯಂತರ ತಡೆ- ವಿಚಾರಣೆ  ಆ.8 ಕ್ಕೆ ಮುಂದೂಡಿದ ಕೋರ್ಟ್

    October 2, 2025
    Share

    ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

    ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

    ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

    ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿರುವ ಮಹೇಶ್‌ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ನಡುವೆ ಶಸ್ತ್ರಾಸ್ತ್ರ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ. ಬಂಧನದ ಭೀತಿಯಲ್ಲಿರುವ ತಿಮರೋಡಿ ಈಗಾಗಲೇ ತಲೆಮರೆಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಿಂದ ಮೂರು ಬಾರಿ ನೋಟಿಸ್‌ ಜಾರಿಯಾದರೂ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ.

    Post Views: 169

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.