Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ಪರವಾನಿಗೆ ಇಲ್ಲದೆ ಕಾರುಗಳನ್ನು ಬಾಡಿಗೆಗೆ ನೀಡಿದ ಆರೋಪ; ಆರೋಪಿಯ ವಿರುದ್ಧ ಕೇಸು ದಾಖಲು
    Uncategorized

    ಉಡುಪಿ: ಪರವಾನಿಗೆ ಇಲ್ಲದೆ ಕಾರುಗಳನ್ನು ಬಾಡಿಗೆಗೆ ನೀಡಿದ ಆರೋಪ; ಆರೋಪಿಯ ವಿರುದ್ಧ ಕೇಸು ದಾಖಲು

    October 16, 2025
    Share

    ಮಲ್ಪೆ: ಪರ್ಮಿಟ್‌ ಪಡೆಯದೆ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಡಿಗೆಗೆ ನೀಡುತ್ತಿದ್ದ 18 ವಿವಿಧ ಮಾದರಿಯ ವೈಟ್‌ ಬೋರ್ಡ್‌ ಕಾರುಗಳನ್ನು ಪತ್ತೆ ಹಚ್ಚಿ ಆರೋಪಿಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.

    ಸಂಬಂಧಪಟ್ಟ ಪ್ರಾಧಿಕಾರದಿಂದ ಅಧಿಕೃತ ಪರವಾನಿಗೆಯನ್ನು ಪಡೆಯದೆ ಮಲ್ಪೆ ಮತ್ತು ಉಡುಪಿ ಪರಿಸರದ ಸಾರ್ವಜನಿಕ ಸ್ಥಳಗಳಲ್ಲಿ ವೈಟ್‌ ಬೋರ್ಡ್‌ ಕಾರುಗಳನ್ನು ಬಾಡಿಗೆಗೆ ನೀಡುತ್ತಿರುವ ಬಗ್ಗೆ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್‌ ಆ್ಯಂಡ್‌ ಮ್ಯಾಕ್ಸಿಕ್ಯಾಬ್‌ ಅಸೋಸಿಯೇಶನಿನ ಮಲ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸ್‌ ಉಪನಿರೀಕ್ಷಕರು ಮತ್ತು ಸಿಬಂದಿ ತೆಂಕನಿಡಿಯೂರು ಗ್ರಾಮದ ಬೆಳ್ಕಲೆ ಹಿರಣ್ಯಧಾಮ ಲೇಔಟ್‌ ಎಂಬಲ್ಲಿ ಆರ್‌.ರಶೀದ್‌ ಎಂಬವರ ಮನೆಯ ಬಳಿ ಇದ್ದ ಕಾರುಗಳ ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ 18 ವಿವಿಧ ಮಾದರಿಯ ವೈಟ್‌ ಬೋರ್ಡ್‌ ಕಾರುಗಳು ನಿಲ್ಲಿಸಿರುವುದು ಕಂಡು ಬಂದಿತ್ತು. ಈ ಬಗ್ಗೆ ಆರ್‌. ರಶೀದ್‌ ಅವರನ್ನು ವಿಚಾರಿಸಿದಾಗ, ಆತ ಈ ಕಾರುಗಳನ್ನು ಬಾಡಿಗೆಗೆ ನೀಡುತ್ತಿರುವುದಾಗಿ ಒಪ್ಪಿಕೊಂಡಿದ್ದರು. ಇಷ್ಟೆಲ್ಲಾ ಕಾರುಗಳನ್ನು ಬಾಡಿಗೆ ನೀಡಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪರ್ಮಿಟ್‌ ಇದೆಯೇ ಎಂದು ವಿಚಾರಿಸಿದಾಗ ಪರ್ಮಿಟ್‌ ಇರುವುದಿಲ್ಲ ಎಂದು ತಿಳಿಸಿರುತ್ತಾರೆ. ಹಾಗಾಗಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪರ್ಮಿಟ್‌ ನ್ನು ಪಡೆಯದೆ ವೈಟ್‌ ಬೋರ್ಡ್‌ ಕಾರುಗಳನ್ನು ಬಾಡಿಗೆಗೆ ನೀಡುತ್ತಿರುವ ಆರೋಪದ ಮೇಲೆ ಆರ್. ರಶೀದ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 153

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.