Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ವರ್ಣ ಜ್ಯುವೆಲ್ಲರಿಗೆ ವಂಚಿಸಿದ್ದ ಅಂತರ್‌ರಾಜ್ಯ ವಂಚನೆ ಆರೋಪಿ ಸೆರೆ: 240 ಗ್ರಾಂ ಚಿನ್ನ ಜಪ್ತಿ
    ಇತ್ತೀಚಿನ ಸುದ್ದಿ

    ಸ್ವರ್ಣ ಜ್ಯುವೆಲ್ಲರಿಗೆ ವಂಚಿಸಿದ್ದ ಅಂತರ್‌ರಾಜ್ಯ ವಂಚನೆ ಆರೋಪಿ ಸೆರೆ: 240 ಗ್ರಾಂ ಚಿನ್ನ ಜಪ್ತಿ

    November 29, 2025
    Share

    ಮಂಗಳೂರು : ಮಂಗಳೂರಿನ ಸ್ವರ್ಣ ಜುವೆಲರ್ಸ್ ಅಂಗಡಿಗೆ ಗ್ರಾಹಕರಂತೆ ಭೇಟಿ ನೀಡಿ, ತನ್ನ ಹೆಸರನ್ನು ಬದಲಿಸಿ 31 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕಿಟ್‌ಗಳನ್ನು ಮೂಲಕ ಪಡೆದು ಪರಾರಿಯಾಗಿದ್ದ ಅಂತರ್‌ರಾಜ್ಯ ವಂಚನೆ ಆರೋಪಿಯನ್ನು ಉರ್ವಾ ಪೊಲೀಸರು ಕೊಯಂಬತ್ತೂರಿನ ಪುಲಿಯಕುಲಂ ಎಂಬಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯಿಂದ 240 ಗ್ರಾಂ 24 ಕ್ಯಾರೆಟ್ ಶುದ್ಧತೆಯ ಚಿನ್ನದ ಬಿಸ್ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ತಮಿಳುನಾಡು ಕೊಯಂಬತ್ತೂರಿನ ಸಿಂಗನಲ್ಲೂರಿನಲ್ಲಿ ಪದ್ಮ ಕಿರಣ್ ಎನ್‌ಕ್ಲೇವ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಪುಗಲ್ ವಾಸನ್ @ ಪುಗಲ್ ಹಸನ್ @ ಅರುಣ್ (50) ಬಂಧಿತ ಆರೋಪಿ. ಘಟನೆಯ ವಿವರ: 21-11-2025ರಂದು ಸಂಜೆ, ಉರ್ವಾಸ್ಟೋರ್–ಚಿಲಿಂಬಿ ಪ್ರದೇಶದ ಗುಜ್ಜಾಡಿ ಚೆಂಬರ್‌ಸ್‌ನಲ್ಲಿರುವ ಸ್ವರ್ಣ ಜುವೆಲರ್ಸ್ ಗೆ ಬಂದಿದ್ದ ‘ಅರುಣ್’ ಎಂಬ ನಕಲಿ ಹೆಸರಿನಲ್ಲಿ ಬಂದಿದ್ದ ವ್ಯಕ್ತಿ, ಬಿಜೈ–ಕಾಫಿಕಾಡ್‌ನಲ್ಲಿರುವ ಅಜಂತ್ ಬಿಸಿನೆಸ್ ಸೆಂಟರ್‌ನಲ್ಲಿ ತಾನು ಹೊಸದಾಗಿ ಕಚೇರಿ ತೆರೆಯುತ್ತಿರುವುದಾಗಿ ಅಂಗಡಿ ಮಾಲಕರಿಗೆ ಪರಿಚಯ ಮಾಡಿಕೊಂಡಿದ್ದ. ಅಲ್ಲಿಗೆ ಬರುವ ಅತಿಥಿಗಳಿಗೆ ಉಡುಗೊರೆಯಾಗಿ ನೀಡುವುದಕ್ಕಾಗಿ ತಲಾ 10 ಗ್ರಾಂ ತೂಕದ 24 ಚಿನ್ನದ ಬಿಸ್ಕಿಟ್‌ಗಳು ಬೇಕೆಂದು ಹೇಳಿ, ಅವುಗಳ ವಿನ್ಯಾಸ ಆಯ್ಕೆ ಮಾಡಿಕೊಂಡಿದ್ದಾನೆ. 22-11-2025 ಮಧ್ಯಾಹ್ನ 12 ಗಂಟೆಗೆ ಅಜಂತ್ ಬಿಸಿನೆಸ್ ಸೆಂಟರ್‌ಗೆ ಚಿನ್ನವನ್ನು ತಂದುಕೊಡಲು ಹೇಳಿ, ಚಿನ್ನ ಸಿಕ್ಕ ಕೂಡಲೇ RTGS ಮೂಲಕ ಹಣ ಪಾವತಿಸುವುದಾಗಿ ನಂಬಿಸಿದ್ದಾನೆ.

    22-11-2025ರಂದು ಜ್ಯುವೆಲ್ಲಸರ್ಸ್‌ನವರು ಚಿನ್ನವನ್ನು ಒಯ್ಯುತ್ತಿದ್ದಾಗ, ಆರೋಪಿಯು ಅವರನ್ನು ಕಟ್ಟಡದ 5ನೇ ಮಹಡಿಯ ಕೆಫೆಟೇರಿಯಾಕ್ಕೆ ಕರೆದುಕೊಂಡು ಹೋಗಿ 24 ಬಿಸ್ಕಿಟ್‌ಗಳನ್ನು ಸ್ವೀಕರಿಸಿದ್ದಾನೆ. ನಂತರ “3ನೇ ಮಹಡಿಯಲ್ಲಿರುವ ನನ್ನ ಕಚೇರಿಯಲ್ಲಿ RTGS ಮಾಡುತ್ತೇನೆ” ಎಂದು ಹೇಳಿ, ಹಣ ಪಾವತಿಸದೇ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ಅಂಗಡಿಯ ಮಾಲಕ ಅಜಯ್ ರಾಮದಾಸ್ ನಾಯಕ್ ಅವರು ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಜಾಡು ಹಿಡಿದ ಪೊಲೀಸರು 26-11-2025ರಂದು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪುಲಿಯಕುಲಂ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆಯಿಂದ, ಈತನು ದೇಶದ ವಿವಿಧ ರಾಜ್ಯಗಳಲ್ಲಿ ನಕಲಿ ಹೆಸರುಗಳನ್ನು ಬಳಸಿಕೊಂಡು ಇದೇ ರೀತಿಯ ವಂಚನೆ ಮಾಡಿರುವುದು ಬಹಿರಂಗವಾಗಿದೆ. ಮುಂಬೈ (ಮಹಾರಾಷ್ಟ್ರ), ಹೈದರಾಬಾದ್ (ತೆಲಂಗಾಣ), ಚಿತ್ತೋಡ್ (ತಮಿಳುನಾಡು), ತಿರುಪತಿ (ಆಂಧ್ರಪ್ರದೇಶ)ಗಳಲ್ಲಿ ಸಹ ಇದೇ ಮಾದರಿಯ ವಂಚನೆ ಪ್ರಕರಣಗಳು ದಾಖಲಾಗಿವೆ. ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ (ಐಪಿಎಎಸ್) ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪ ಆಯುಕ್ತ ಮಿಥುನ್ ಎಚ್.ಎನ್ (ಕಾ&ಸು) ಮತ್ತು *ರವಿಶಂಕರ್ (ಅಪರಾಧ) ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯ ನೇತೃತ್ವವನ್ನು ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಗ್ ತೋರಟ್ ವಹಿಸಿಕೊಂಡಿದ್ದರು. ತಂಡದಲ್ಲಿ ಉರ್ವಾ ಠಾಣೆಯ ಪಿಐ ಶ್ಯಾಮ್ ಸುಂದರ್ ಹೆಚ್.ಎಮ್, ಪಿಎಸ್‌ಐ ಗುರಪ್ಪ ಕಾಂತಿ, ಪಿಎಸ್‌ಐ ಎಲ್. ಮಂಜುಳಾ, ಎಎಸ್‌ಐ ವಿನಯ್ ಕುಮಾರ್ ಮತ್ತು ಸಿಬ್ಬಂದಿ ಅನಿಲ್, ಭಾಸ್ಕರ್, ಹರೀಶ್, ವೆಂಕಟೇಶ್, ಚಂದ್ರಹಾಸ, ಯೆಲ್ಲಾಲಿಂಗ ಇದ್ದರು.

    Post Views: 170

    Related Posts

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.