Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚೈತ್ರಾ ಕುಂದಾಪುರ ಅವರ ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ : ಎಸಿ ಕೋರ್ಟ್ ಆದೇಶ
    ಇತ್ತೀಚಿನ ಸುದ್ದಿ

    ಚೈತ್ರಾ ಕುಂದಾಪುರ ಅವರ ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ : ಎಸಿ ಕೋರ್ಟ್ ಆದೇಶ

    December 20, 2025
    Share

    ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು.

    ಈ ಸಂಬಂಧದ ಕೋರ್ಟ್ ತೀರ್ಪು ನೀಡಿದೆ.
    ತಂದೆಗೆ ಮಗಳು ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಅವರ ಸ್ವತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ಮುಚ್ಚಳಿಕೆ ನೀಡಬೇಕು ಎಂದು ಎಂದು ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.

    ಕೆಲ ಸಮಯ ಹಿಂದಷ್ಟೇ ಚೈತ್ರಾ ಕುಂದಾಪುರ ಅವರು ಮದುವೆಯಾದ ಬಳಿಕ ಅವರ ತಂದೆ ಬಾಲಕೃಷ್ಣ ನಾಯಕ್ ಮಗಳ ವಿರುದ್ಧವೇ ಸಾಲು ಸಾಲು ಆರೋಪಗಳನ್ನು ಮಾಡಿದ್ದರು.

    ಚೈತ್ರಾ ಅವರ ಅವ್ಯವಹಾರದಿಂದ ಬೇಸತ್ತು 71 ವರ್ಷದ ತಾನು ಮನೆ ಬಿಟ್ಟು ಮಂಗಳೂರಿನಲ್ಲಿ ಹೋಟೆಲ್ ಕೆಲಸಕ್ಕೆ ಸೇರಿದ್ದು ಇನ್ನೊಬ್ಬ ಮಗಳನ್ನು ಭೇಟಿ ಮಾಡಲು ಆಗಾಗ ಮನೆಗೆ ಬರುತ್ತಿದ್ದೆ. ಆಗ ಮಡದಿ ಹಾಗೂ ಮಗಳು ಸ್ವಂತ ಮನೆಗೆ ಪ್ರವೇಶಿಸಲು ಅವಕಾಶ ನೀಡುತ್ತಿರಲಿಲ್ಲ. ಸಾರ್ವಜನಿಕವಾಗಿ ತನ್ನ ಮಾನ ಹಾನಿ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

    ಈ ಮನೆಯಲ್ಲಿ ವಾಸಿಸಲು ರಕ್ಷಣೆ ಬೇಕು. ಸಂಬಂಧಪಟ್ಟ ಆಸ್ತಿಯಿಂದ ಬರುವ ಬಾಡಿಗೆ ತನಗೆ ದೊರೆಯಬೇಕು, ಈ ಮನೆಯಲ್ಲಿ ವಾಸಿಸಲು ರಕ್ಷಣೆ ಬೇಕು ಎಂದು ಅವರು ಪ್ರಕರಣ ದಾಖಲಿಸಿದ್ದರು.

    ವಾದ ವಿವಾದ ಆಲಿಸಿದ ಸಹಾಯಕ ಕಮಿಷನ‌ರ್ ರಶ್ಮೀ ಎಸ್.ಆರ್. ಬಾಡಿಗೆ ಹಣದ ಕುರಿತು ಯಾವುದೇ ದಾಖಲೆ ಸಲ್ಲಿಸಿಲ್ಲ. ಪ್ರಸ್ತುತ ಈ ಮನೆಯಲ್ಲಿ ಚೈತ್ರಾ ವಾಸಿಸುತ್ತಿಲ್ಲ. ಆದರೆ ಈ ಹಿಂದೆ ಪ್ರಕರಣ ದಾಖಲಾಗಿದೆ. ಆದ್ದರಿಂದ ಇನ್ನು ಮುಂದೆ ತಂದೆ ಅವರ ಮನೆಯಲ್ಲಿ ವಾಸಿಸಲು ತೊಂದರೆ ಮಾಡಬಾರದು. ದೈಹಿಕ, ಮಾನಸಿಕ ಹಿಂಸೆ ನೀಡಬಾರದು ಎಂದು ಆದೇಶ ನೀಡಿದ್ದಾರೆ.

    ಬಾಲಕೃಷ್ಣ ನಾಯಕ್ ಪರ ನ್ಯಾಯವಾದಿ ಕೆ.ಸಿ. ಶೆಟ್ಟಿ ಕುಂದಾಪುರ ವಾದಿಸಿದ್ದರು.

    Post Views: 259

    Related Posts

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.