Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಾಸ್‌ಪೋರ್ಟ್‌ಗಾಗಿ ದಾಖಲೆ ತಿದ್ದುಪಡಿ, ಸಹಿ ಫೋರ್ಜರಿ: ವಿಟ್ಲ ಠಾಣಾ ಸಿಬ್ಬಂದಿ ಸಹಿತ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಪಾಸ್‌ಪೋರ್ಟ್‌ಗಾಗಿ ದಾಖಲೆ ತಿದ್ದುಪಡಿ, ಸಹಿ ಫೋರ್ಜರಿ: ವಿಟ್ಲ ಠಾಣಾ ಸಿಬ್ಬಂದಿ ಸಹಿತ ಇಬ್ಬರ ಬಂಧನ

    December 24, 2025
    Share

    ಮಂಗಳೂರು: ಪಾಸ್‌ಪೋರ್ಟ್‌ ಅರ್ಜಿಯ ಪೊಲೀಸ್‌ ಪರಿಶೀಲನಾ ವರದಿಯಲ್ಲಿ ವಂಚನೆ ಎಸಗಿ, ಸಹಿ ಫೋರ್ಜರಿ ಮಾಡಿದ ಆರೋಪದಡಿ ವಿಟ್ಲ ಪೊಲೀಸ್‌ ಠಾಣೆಯ ಸಿಬ್ಬಂದಿ ಪ್ರದೀಪ್‌ ಹಾಗೂ ಸುಳ್ಳು ದಾಖಲೆ ನೀಡಿ ಪಾಸ್‌ಪೋರ್ಟ್‌ ಪಡೆದ ಶಕ್ತಿ ದಾಸ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಶಕ್ತಿ ದಾಸ್‌ ಎಂಬಾತ ಫೆಬ್ರವರಿ 2025ರಲ್ಲಿ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದನು. ಆದರೆ ಪೊಲೀಸ್‌ ವೆರಿಫಿಕೇಶನ್‌ ವೇಳೆ ಆತ ನೀಡಿದ್ದ ವಿಳಾಸವು ದಾಖಲಾತಿಗಳಿಗೆ ತಾಳೆಯಾಗದ ಕಾರಣ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ತದನಂತರ ಜೂನ್‌ನಲ್ಲಿ ಆತ ಮತ್ತೆ ಮರು ಅರ್ಜಿ ಸಲ್ಲಿಸಿದ್ದನು.

    ಈ ಮರು ಅರ್ಜಿಯ ಪರಿಶೀಲನೆಯ ಹೊಣೆ ಹೊತ್ತಿದ್ದ ಠಾಣಾ ಸಿಬ್ಬಂದಿ ಪ್ರದೀಪ್‌, ಸಂಬಂಧಪಟ್ಟ ಬೀಟ್‌ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಗಮನಕ್ಕೆ ಬಾರದಂತೆ ಅವರ ಹೆಸರಿನಲ್ಲೇ ನಕಲಿ ವರದಿ ಸಿದ್ಧಪಡಿಸಿದ್ದರು. ಅಷ್ಟೇ ಅಲ್ಲದೆ, ಸಾಬು ಮಿರ್ಜಿ ಅವರ ಸಹಿಯನ್ನು ಫೋರ್ಜರಿ ಮಾಡಿ ಮೇಲಾಧಿಕಾರಿಗಳಿಂದ ಶಿಫಾರಸ್ಸು ಮಾಡಿಸಿ ಪಾಸ್‌ಪೋರ್ಟ್‌ ಹಾಗೂ ಪೊಲೀಸ್‌ ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಸಿಗುವಂತೆ ಮಾಡಿದ್ದರು. ಬಳಿಕ ಈ ಅಕ್ರಮ ಯಾರಿಗೂ ತಿಳಿಯಬಾರದೆಂದು ಸಂಬಂಧಪಟ್ಟ ಕಡತಗಳನ್ನು ನಾಶಪಡಿಸಿದ್ದರು ಎನ್ನಲಾಗಿದೆ.

    ಡಿಸೆಂಬರ್ 19 ರಂದು ಕಚೇರಿಯ ದಾಖಲೆಗಳನ್ನು ಪರಿಶೀಲಿಸಿದಾಗ ಈ ಗಂಭೀರ ಲೋಪ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಪ್ರಮುಖ ಗುರುತಿನ ಚೀಟಿಯಾದ ಪಾಸ್‌ಪೋರ್ಟ್‌ ಪಡೆಯಲು ಅಪರಾಧಿಕ ನಂಬಿಕೆ ದ್ರೋಹ ಎಸಗಿದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.

    ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಪ್ರದೀಪ್‌ನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 214

    Related Posts

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.