Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ವಂತ ಕಾರಿಗೆ ಪೊಲೀಸ್ ನಾಮಫಲಕ: ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಂಡ ‘PSI’, ಭಾರೀ ಮೆಚ್ಚುಗೆ
    ಇತ್ತೀಚಿನ ಸುದ್ದಿ

    ಸ್ವಂತ ಕಾರಿಗೆ ಪೊಲೀಸ್ ನಾಮಫಲಕ: ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಂಡ ‘PSI’, ಭಾರೀ ಮೆಚ್ಚುಗೆ

    December 26, 2025
    Share

    ಸರ್ಕಾರಿ ಕಾರಿಗೆ ಇಲಾಖೆಯ ಹೆಸರು ಹಾಕಿಕೊಳ್ಳುವುದು ಮಾಮೂಲಿ. ಪೊಲೀಸ್ ಆದರೇ ಪೊಲೀಸ್, ಕಂದಾಯ ಇಲಾಖೆ ಆದರೇ ಕಂದಾಯ, ಅಬಕಾರಿ ಇಲಾಖೆ ಆದರೇ ಅಬಕಾರಿ ಅಂತ ಹೀಗೆ. ಆದರೇ ಇಲ್ಲೊಬ್ಬ ಪೊಲೀಸ್ ಅಧಿಕಾರಿ ತನ್ನ ಸ್ವಂತ ಕಾರಿಗೆ ಪೊಲೀಸ್ ಅಂತ ನಾಮಫಲಕ ಹಾಕಿಕೊಂಡು ಫ್ಯಾಮಿಲಿ ಸಹಿತ ಟ್ರಿಪ್ ಗೆ ತೆರಳಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿರುವಂತ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಇಂತಹ ಅಧಿಕಾರಿಗೆ ಕಾನೂನು ಬಿಸಿ ಮುಟ್ಟಿಸಿದಂತ ಪಿಎಸ್ಐ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಹೊಸ ವರ್ಷದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ವಾಹನಗಳನ್ನು ಬಣಕಲ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೇಣುಕಾ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಖಾಸಗಿ ವಾಹನವಾಗಿದ್ದರೂ ಪೊಲೀಸ್ ಎನ್ನುವಂತ ನಾಮಫಲಕವೊಂದನ್ನು ಹಾಕಿದ್ದು ಕಂಡು ಬಂದಿದೆ.

    ಸ್ವಂತ ವಾಹನಕ್ಕೆ ಪೊಲೀಸ್ ಎಂಬುದಾಗಿ ನಾಮಫಲಕ ಹೊಂದಿದ್ದನ್ನು ಪರಿಶೀಲಿಸಿದಾಗ, ಅವರು ಧಾರವಾಡದಿಂದ ಧರ್ಮಸ್ಥಳಕ್ಕೆ ಕುಟುಂಬ ಸಮೇತ ಫ್ಯಾಮಿಲಿ ಟ್ರಿಪ್ ಬಂದಿರೋದು ತಿಳಿದು ಬಂದಿದೆ. ಕರ್ತವ್ಯದಲ್ಲಿ ಇಲ್ಲದೇ ಪೊಲೀಸ್ ಎಂಬುದಾಗಿ ನಾಮಫಲಕವನ್ನು ಅನಧಿಕೃತವಾಗಿ ಹಾಕಿಕೊಂಡಿದ್ದನ್ನು ಪಿಎಸ್ಐ ರೇಣುಕಾ ಪ್ರಶ್ನಿಸಿದ್ದಾರೆ.

    ನಿಯಮಾನುಸಾರ ಕರ್ತವ್ಯದಲ್ಲಿ ಇಲ್ಲದಂತ ಸಂದರ್ಭದಲ್ಲಿ ಅಥವಾ ಅಧಿಕೃತ ಅನುಮತಿ ಇಲ್ಲದೇ ಪೊಲೀಸ್ ನಾಮಫಲಕ ಅಳವಡಿಸಿಕೊಂಡಿರೋದು ಕಾನೂನು ಬಾಹಿರವಾಗಿದೆ. ಇದು ಕಾನೂನು ಉಲ್ಲಂಘನೆಯಾಗಿದೆ ಎಂಬುದಾಗಿ ಹೇಳುವ ಮೂಲಕ ಬಣಕಲ್ ಠಾಣೆಯ ಪಿಎಸ್ಐ ರೇಣುಕಾ ಅನಧಿಕೃತವಾಗಿ ಪೊಲೀಸ್ ಎಂಬುದಾಗಿ ತಮ್ಮ ಖಾಸಗಿ ಕಾರಿಗೆ ಅಳವಡಿಸಿದ್ದಂತ ನಾಮಫಲಕವನ್ನು ತೆರವುಗೊಳಿಸಿದ್ದಾರೆ. ಅಲ್ಲದೇ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಅಧಿಕಾರಿಯ ವಿರುದ್ಧವೇ ಕೇಸ್ ದಾಖಲಿಸಿ, ದಂಡ ವಿಧಿಸಿದ್ದಾರೆ.

    ಒಬ್ಬ ಪೊಲೀಸ್ ಅಧಿಕಾರಿಯಾಗಿ, ಮತ್ತೊಬ್ಬ ಪೊಲೀಸ್ ಅಧಿಕಾರಿ ಎಂಬುದನ್ನು ಲೆಕ್ಕಿಸದೇ ಕಾನೂನು ಬಾಹಿರವಾಗಿ, ಅನಧಿಕೃತವಾಗಿ ಪೊಲೀಸ್ ಎಂಬುದಾಗಿ ತಮ್ಮ ಸ್ವಂತ ಕಾರಿಗೆ ನಾಮಫಲಕ ಅಳವಡಿಸಿದ್ದ ಸರ್ಕಾರಿ ಅಧಿಕಾರಿಗೆ ಕಾನೂನಿನ ಅಸ್ತ್ರದ ಮೂಲಕ ಬಣಕಲ್ ಠಾಣೆಯ ಪಿಎಸ್ಐ ರೇಣುಕಾ ಬಿಸಿ ಮುಟ್ಟಿಸಿದ್ದಾರೆ. ಅವರ ಈ ಕ್ರಮದ ಬಗ್ಗೆ ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

    Post Views: 208

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.