Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬ ಆಚರಿಸಿ: ಪರಿಸರ ಇಲಾಖೆ ಮನವಿ
    ಇತ್ತೀಚಿನ ಸುದ್ದಿ

    ಉಡುಪಿ: ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬ ಆಚರಿಸಿ: ಪರಿಸರ ಇಲಾಖೆ ಮನವಿ

    August 27, 2022
    Share

    ಉಡುಪಿ: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತಗೊಂಡು ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ವಿಷಕಾರಿ ರಾಸಾಯನಿಕ, ಲೋಹಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಹಾಳಾಗುತ್ತದೆ.

    ಆದ್ದರಿಂದ ಬಕೆಟ್‌ನಲ್ಲಿ ಮೂರ್ತಿಯನ್ನು ವಿಸರ್ಜಿಸಬೇಕು ಅಥವಾ ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆದು ನಂತರ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗಿ, ಪರಿಸರಕ್ಕೆ ಹಾನಿಯಾಗುತ್ತದೆ. ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಕಸಗಳನ್ನು ಎಸೆಯದೇ ಕಸದ ಡಬ್ಬಿಗಳಿಗೆ ಹಾಕುವಂತೆ ಪರಿಸರ ಇಲಾಖೆಯ ಪ್ರಕಟಣೆ ತಿಳಿಸಿದೆ.

    Post Views: 219

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.