Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌..!!
    ಇತ್ತೀಚಿನ ಸುದ್ದಿ

    16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌..!!

    January 31, 2026
    Share

    ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.

    ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಕುರಿತು ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದು ಗಂಭೀರ ವಿಷಯವಾಗಿದೆ ಎಂದು ಸಹಮತ ವ್ಯಕ್ತಪಡಿಸಿದರು. ಅಲ್ಲದೆ, ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸುವ ಬಗ್ಗೆ ಯೋಚಿಸಲಾಗುವುದು ಎಂದರು.

    ಈ ನಿಟ್ಟಿನಲ್ಲಿ ಫಿನ್​ಲ್ಯಾಂಡ್ ಈಗಾಗಲೇ ಕ್ರಮ ಕೈಗೊಂಡಿದೆ, ಬ್ರಿಟನ್ ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಿತು. ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮದ ಜವಾಬ್ದಾರಿಯುತ ಬಳಕೆಗಾಗಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಐಟಿ-ಬಿಟಿ ಇಲಾಖೆ ಮೆಟಾ ಸಹಯೋಗದೊಂದಿಗೆ ಮೂರು ಲಕ್ಷಕ್ಕೂ ಹೆಚ್ಚು ಮಕ್ಕಳು ಮತ್ತು ಒಂದು ಲಕ್ಷ ಶಿಕ್ಷಕರನ್ನು ಒಳಗೊಂಡಂತೆ ಈ ಕಾರ್ಯ ನಡೆಸುತ್ತಿದೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

    ಡಿಜಿಟಲ್ ವ್ಯಸನದಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸಹಾಯ ಮಾಡಲು 2025ರ ಮಾರ್ಚ್​​ನಲ್ಲಿ ‘ಬಿಯಾಂಡ್ ಸ್ಕ್ರೀನ್ಸ್’ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಡಿಜಿಟಲ್ ಡಿಟಾಕ್ಸ್ ಸೆಂಟರ್ ಮತ್ತು ಇಲಾಖೆಯ ಅಧಿಕೃತ ವೆಬ್‌ಸೈಟ್ ಉದ್ಘಾಟಿಸಿದ ನಂತರ GAFX 2025 ಶೃಂಗಸಭೆಯಲ್ಲಿ ಈ ಉಪಕ್ರಮವನ್ನು ಘೋಷಿಸಲಾಗಿತ್ತು. ಡಿಟಾಕ್ಸ್ ಸೆಂಟರ್ ಎಂಬುದು ಆರೋಗ್ಯಕರ ಡಿಜಿಟಲ್ ಬಳಕೆಗಾಗಿ ಸಂಪನ್ಮೂಲಗಳು, ಸಮಾಲೋಚನೆ ಇತ್ಯಾದಿಗಳಿಗೆ ಮೀಸಲಾದ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.

    ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಗೆ ವಯಸ್ಸಿನ ಆಧಾರಿತ ನಿರ್ಬಂಧವನ್ನು ವಿಧಿಸುವಂತೆ ಗುರುವಾರ ಲೋಕಸಭೆಗೆ ಸಲ್ಲಿಸಲಾದ 2025-26ರ ಆರ್ಥಿಕ ಸಮೀಕ್ಷೆಯಲ್ಲಿ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂಬುದನ್ನು ಸದನದಲ್ಲಿ ಸುರೇಶ್ ಕುಮಾರ್ ತಿಳಿಸಿದರು.

    Post Views: 269

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.