Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ತೀವ್ರ ರಕ್ತದೊತ್ತಡದಿಂದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ನಿಧನ..!
    ಇತ್ತೀಚಿನ ಸುದ್ದಿ

    ಮಂಗಳೂರು : ತೀವ್ರ ರಕ್ತದೊತ್ತಡದಿಂದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ನಿಧನ..!

    February 3, 2026
    Share

    ಮಂಗಳೂರು: ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ಅವರು ತೀವ್ರ ರಕ್ತದೊತ್ತಡದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

    ಮಾರುತಿ ಲಮಾಣಿ ಅವರು ಕಳೆದ ಆರು ವರ್ಷಗಳಿಂದ ಮಂಗಳೂರು ನಗರದ ಸಶಸ್ತ್ರ ನಗರ ಮೀಸಲು ಪಡೆ (ಸಿಎಆರ್)ಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಕದ್ರಿ ಠಾಣೆ ಸೇರಿದಂತೆ ನಗರದ ಸಿಎಆರ್ ಕಚೇರಿಯಲ್ಲಿ ಹೆಚ್ಚಿನ ಅವಧಿಗೆ ಕರ್ತವ್ಯ ನಿರ್ವಹಿಸಿದ್ದರು.

    ಎರಡು ದಿನಗಳ ಹಿಂದೆ ರಾತ್ರಿ ಪಾಳೆಯ ಕರ್ತವ್ಯ ಮುಗಿಸಿ ಬಿಕರ್ನಕಟ್ಟೆಯಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾದ ಅವರು, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆದಿದ್ದರು. ನಂತರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮನೆಯವರು ತಕ್ಷಣ ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ತೀವ್ರ ರಕ್ತದೊತ್ತಡ ಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

    2016ನೇ ಬ್ಯಾಚ್‌ನ ಪೊಲೀಸ್ ಸಿಬ್ಬಂದಿಯಾಗಿದ್ದ ಮಾರುತಿ ಲಮಾಣಿ ಅವರ ಪತ್ನಿಯೂ ಪೊಲೀಸ್ ಸಿಬ್ಬಂದಿಯಾಗಿದ್ದು, ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

    Post Views: 164

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.