Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಅರ್ಥದಾರಿ ನಾರಾಯಣ ಬಿಲ್ಲವ ಅಸ್ತಂಗತ
    ಇತ್ತೀಚಿನ ಸುದ್ದಿ

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಅರ್ಥದಾರಿ ನಾರಾಯಣ ಬಿಲ್ಲವ ಅಸ್ತಂಗತ

    August 30, 2022
    Share

    ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆ ಸೂತ್ರಧಾರ ಹಾಗೂ ಅರ್ಥಧಾರಿ, ಹಿರಿಯ ಗೊಂಬೆಯಾಟ ಕಲಾವಿದ ಹೆಮ್ಮಾಡಿ ಹೇಮಾಪುರ ನಿವಾಸಿ ನಾರಾಯಣ ಬಿಲ್ಲವ (63) ಅನಾರೋಗ್ಯದಿಂದ ಸೋಮವಾರ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

    ನಾರಾಯಣ ಬಿಲ್ಲವ ಅವರು ಕಳೆದ 43 ವರ್ಷದಿಂದ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಖಾಯಂ ಕಲಾವಿದರಾಗಿದ್ದು, ವಿದೇಶದಲ್ಲಿ ನಡೆದ ಗೊಂಬೆಯಾಟ ಪ್ರದರ್ಶನಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಅರ್ಥ ಹೇಳುತ್ತಿದ್ದರು. ಕನ್ನಡ, ಕೊಂಕಣಿ, ಇಂಗ್ಲೀಷ್, ಹಿಂದಿ ಭಾಷೆಯಲ್ಲಿ ಹಿಡಿತ ಹೊಂದಿದ್ದ ಅವರು ಗೊಂಬೆಯಾಟದ ಸೂತ್ರಧಾರಿ ಹಾಗೂ ಅರ್ಥಧಾರಿಯಾಗಿ ಜನ ಮಾನಸದಲ್ಲಿ ನೆಲೆಯೂರಿದ್ದರು.

    ಉಪ್ಪಿನಕುದ್ರು ಗೊಂಬೆಯಾಟದ ಸಂಸ್ಥಾಪಕ ಕೊಗ್ಗ ದೇವಣ್ಣ ಕಾಮತ್ ಅವರ ಒಡನಾಡಿಯಾಗಿದ್ದು, ಅವರೊಟ್ಟಿಗೂ ತಿರುಗಾಟ ಮಾಡಿದ್ದ ಅವರು, ಮುಂದೆ ಕೊಗ್ಗ ಕಾಮತ್ ಅವರ ಪುತ್ರ ಭಾಸ್ಕರ ಕೊಗ್ಗ ಕಾಮತ್ ಜೊತೆ ಕಲಾವಿದರಾಗಿ ಮುಂದುವರಿದಿದ್ದರು.

    ಓದಿದ್ದು ಸ್ವಲ್ಪವಾದರೂ ಇಂಗ್ಲಿಷ್, ಹಿಂದಿ ಭಾಷೆಯ ಮೇಲಿನ ಅವರ ಹಿಡಿತ ನಿಜಕ್ಕೂ ಅದ್ಭುತವಾಗಿತ್ತು. ಕೊಂಕಣಿ ಭಾಷೆ ನಿರರ್ಗಳವಾಗಿ ಹರಿದು ಬರುತ್ತಿತ್ತು. ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮೃತರು ಪತ್ನಿ, ಕುಟುಂಬಿಕರನ್ನು ಅಗಲಿದ್ದಾರೆ. ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್ ಹಾಗೂ ಸಹ ಕಲಾವಿದರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

    Post Views: 117

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.