Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರು ಪೋಕ್ಸೋ ಕೇಸ್ ಗಳಲ್ಲಿ ಸಂತ್ರಸ್ತರ ಹೆಸರು, ವಿಳಾಸಗಳ ಗೌಪತ್ಯೆ ಕಾಪಾಡುವುದು ಕಡ್ಡಾಯ !
    ಇತ್ತೀಚಿನ ಸುದ್ದಿ

    ಪೊಲೀಸರು ಪೋಕ್ಸೋ ಕೇಸ್ ಗಳಲ್ಲಿ ಸಂತ್ರಸ್ತರ ಹೆಸರು, ವಿಳಾಸಗಳ ಗೌಪತ್ಯೆ ಕಾಪಾಡುವುದು ಕಡ್ಡಾಯ !

    February 17, 2026
    Share

    ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ಪೊಲೀಸರು ದೂರು ಅರ್ಜಿ, ಪ್ರಥಮ ವರ್ತಮಾನ ವರದಿ ಮತ್ತು ತನಿಖಾ ವರದಿಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ಮತ್ತು ವಿಳಾಸಗಳ ಗೌಪತ್ಯೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.

    ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ, ಪ್ರಥಮ ವರ್ತಮಾನ ವರದಿ ಮತ್ತು ತನಿಖಾ ವರದಿಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ಮತ್ತು ವಿಳಾಸಗಳ ಗೌಪತ್ಯೆಯನ್ನು ಕಾಪಾಡುವ ಸಂಬಂಧ ಉಲ್ಲೇಖಿ-(1)ರ ಮಾನ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ. ಅದರಂತೆ ನ್ಯಾಯಾಲಯದ ಆದೇಶದಂತೆ ಮಹಿಳೆ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳಾದ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು, ಗುರುತು ಮತ್ತು ವಿಳಾಸವನ್ನು ಪೊಲೀಸ್ ಠಾಣಾಧಿಕಾರಿಗಳು ಸಾರ್ವಜನಿಕಗೊಳಿಸದಂತೆ ಗೌಪ್ಯತೆ ಕಾಪಾಡಿಕೊಳ್ಳುವಂತೆ ಈ ಕಛೇರಿಯಿಂದ ಉಲ್ಲೇಖಿತ-2ರ ಸ್ಥಾಯಿ ಆದೇಶದಲ್ಲಿ ಸೂಚನೆ ನೀಡಲಾಗಿತ್ತು.

    ಆದರೆ ಈ ಕಛೇರಿಯು ಸ್ಥಾಯಿ ಆದೇಶ ಸಂ. 1024 ರಲ್ಲಿ ನ್ಯಾಯಾಲಯದ ತೀರ್ಪಿನಲ್ಲಿ ನೀಡಿದ ಸೂಚನೆಗಳನ್ನು ನೀಡಿದ್ದರು ಸಹ ಕೆಲವು ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ಮತ್ತು ತನಿಖಾಧಿಕಾರಿಗಳು ಮಹಿಳೆಯರ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳನ್ನು ದಾಖಲಿಸುವ ಸಂದರ್ಭದಲ್ಲಿ ಪ್ರಥಮ ವರ್ತಮಾನ ವರದಿಯಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ಮತ್ತು ವಿಳಾಸಗಳನ್ನು ಸಾರ್ವಜನಿಕಗೊಳಿಸುವ ಮತ್ತು ತನಿಖಾ ವರದಿಯಲ್ಲಿಯೂ ಸಹ ಗೌಪ್ಯತೆಯನ್ನು ವಿಚಾರಣೆ ಕಾಪಾಡಿಕೊಳ್ಳದೇ ಇರುವುದು ಕಂಡುಬಂದಿದ್ದು, ಇದರಿಂದ ಪ್ರಕರಣಗಳು ನ್ಯಾಯಾಲಯದ ಸಂದರ್ಭದಲ್ಲಿ ಆಕ್ಷೇಪಣೆ ವ್ಯಕ್ತಪಡಿಸುವ ಸಾಧ್ಯತೆ ಇರುತ್ತದೆ, ಆದುದರಿಂದ ಇನ್ನುಮುಂದೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ಮತ್ತು ತನಿಖಾಧಿಕಾರಿಗಳಿಗೆ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಮತ್ತು ಅಪ್ರಾಪ್ತರ ಹೆಸರು ಮತ್ತು ವಿಳಾಸಗಳ ಗೌಪ್ಯತೆಯನ್ನು ಕಾಪಾಡಿ, ಸಲ್ಲಿಸುವ ದಾಖಲಾತಿಗಳಲ್ಲಿ ಹೆಸರು, ಗುರುತು ಮತ್ತು ವಿಳಾಸವನ್ನು ಗೌಪ್ಯತೆ ಕಾಪಾಡುವ ಕುರಿತಂತೆ ಈ ಕೆಳಗಿನ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

    1. ಮೂಲ ದೂರು ಅರ್ಜಿಯಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು, ವಿಳಾಸ ಮತ್ತು ಗುರುತುಗಳ ವಿವರಗಳ ಇರತಕ್ಕದ್ದು.

    2. ದೂರು ಸ್ವೀಕರಿಸಿದ ನಂತರ ಠಾಣಾಧಿಕಾರಿ/ ತನಿಖಾಧಿಕಾರಿಯು ಸದರಿ ಮೂಲ ದೂರಿನಲ್ಲಿನ ನೊಂದವರ ಗುರುತುಗಳ ಗೌಪ್ಯತೆ ಕಾಪಾಡಲು ಮೂಲ ಹೆಸರಿನ ಬದಲು ಬೇರೆ ಹೆಸರನ್ನು ಅಥವಾ ಅಕ್ಷರಗಳನ್ನು ನೀಡಿ ನ್ಯಾಯಾಲಯಕ್ಕೆ ಮೂಲ ದೂರು ಮತ್ತು ಯಾವ ಬದಲಿ ಹೆಸರು ನೀಡಲಾಗಿದೆ ಎಂಬುದನ್ನು ಸೀಲ್ಡ್ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದು ಕಡ್ಡಾಯ.

    3. ಪ್ರಥಮ ವರ್ತಮಾನ ವರದಿಯಲ್ಲಿ ನೊಂದವರ ಮೂಲ ಹೆಸರು ದಾಖಲಿಸದೇ ಬದಲಿಸಿದ ಹೆಸರನ್ನು ಅಥವಾ ಅಕ್ಷರಗಳನ್ನು ಸ್ಪಷ್ಟವಾಗಿ ನಮೂದಿಸುವುದು ಮತ್ತು ಹೆಸರು ಬದಲಾಯಿಸಲಾಗಿದೆ ಎಂದು ಟಿಪ್ಪಣಿಯಲ್ಲಿ ನಮೂದಿಸುವುದು.

    4. ನೊಂದವರ ಬದಲಾಯಿಸಿದ ಹೆಸರಿನಲ್ಲಿಯೇ ಇತರೆ ವ್ಯವಹಾರಗಳನ್ನು ಮಾಡುವುದು.

    5. ತನಿಖೆಯಲ್ಲಿ ದಾಖಲು ಮಾಡಿಕೊಳ್ಳುವ ಸಾಕ್ಷಿದಾರರ ಹೇಳಿಕೆಗಳಲ್ಲಿ ನೊಂದವರ ಮೂಲ ಹೆಸರು ಮತ್ತು ಗುರುತಿಸುವಿಕೆಯನ್ನು ದಾಖಲು ಮಾಡಿಕೊಂಡ ನಂತರ ಆ ಹೇಳಿಕೆಗಳನ್ನು ಸೀಲ್ಡ್ ಲಕೋಟೆಯಲ್ಲಿ ಇರಿಸಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಬದಲಾಯಿತ ಹೆಸರಿನಲ್ಲಿ ಹೇಳಿಕೆಯ ಪ್ರತಿಗಳನ್ನು ನಿತ್ಯದ ತನಿಖೆಗಳಲ್ಲಿ ಬಳಸಿಕೊಳ್ಳುವುದು.

    6. ದೋಷಾರೋಪಣಾ ವರದಿಯಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಗುರುತು, ವಿಳಾಸವಿರುವ ವಿವರಗಳನ್ನು ಸ್ಪಷ್ಟವಾಗಿ ನಮೂದಿಸಿ ಆರೋಪಿಯ ವಿರುದ್ಧ ದೋಷಾರೋಪಣೆಯನ್ನು ರಚಿಸುವುದು ಮತ್ತು ಸದರಿ ದೋಷಾರೋಪಣಾ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದು. ಇದಕ್ಕೆ ಪ್ರತಿಯಾಗಿ ಮತ್ತೊಂದು ದೋಷಾರೋಪಣಾ ವರದಿಯ ಪ್ರತಿಯಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಬದಲಾಯಿತ ಹೆಸರನ್ನು ಬಳಸಿಕೊಂಡು ದೋಷಾರೋಪಣಾ ಪ್ರತಿಯನ್ನು ತಯಾರಿಸುವುದು. ಸದರಿ ದೋಷಾರೋಪಣಾ ವರದಿಯ ಪ್ರತಿಯನ್ನು ಆರೋಪಿ ಮತ್ತು ಅಭಿಯೋಜಕರಿಗೆ ಪೂರೈಸಲು ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ನಿವೇದಿಸಿಕೊಳ್ಳಬೇಕು.

    Post Views: 228

    Related Posts

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.